ಮನೆ ರಾಜ್ಯ ಚಾಮರಾಜನಗರ: ದೀಪಾಲಂಕಾರ ಅವ್ಯವಸ್ಥೆ- ಕಪ್ಪು ಬಾವುಟ ಪ್ರದರ್ಶನ

ಚಾಮರಾಜನಗರ: ದೀಪಾಲಂಕಾರ ಅವ್ಯವಸ್ಥೆ- ಕಪ್ಪು ಬಾವುಟ ಪ್ರದರ್ಶನ

0

ಚಾಮರಾಜನಗರ(Chamarajanagara): ದೀಪಾಲಂಕಾರ ಅವ್ಯವಸ್ಥೆ ಖಂಡಿಸಿ ಚಾಮರಾಜನಗರ ಜಿಲ್ಲಾ ದಸರಾದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ವೇಳೆ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ವೇದಿಕೆಯಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡಿದರು.

ಚಾಮರಾಜೇಶ್ವರ ದೇವಾಲಯದ ಮುಂಭಾಗ ನಿರ್ಮಿಸಿರುವ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟಿಸಲು ಸಚಿವ ಸೋಮಣ್ಣ ವೇದಿಕೆಯಲ್ಲಿ ಕುಳಿತಿದ್ದ ಸಂದರ್ಭದಲ್ಲಿ ನಗರಸಭಾ ಸದಸ್ಯ ಆರ್‌.ಪಿ.ನಂಜುಂಡಸ್ವಾಮಿ ಕಪ್ಪು ಬಾವುಟ ಪ್ರದರ್ಶಿಸಿದ್ದು,  ಅಲ್ಲೇ ಇದ್ದ ಪೊಲೀಸರು ಅವರನ್ನು ಹೊರಕ್ಕೆ ಎಳೆದೊಯ್ದರು‌.

ಇನ್ನು, ಅನಿರೀಕ್ಷಿತ ಘಟನೆಯಿಂದ ಕೆಂಡಾಮಂಡಲರಾದ ಸಚಿವ ಸೋಮಣ್ಣ, ಪೊಲೀಸರು ಏನು ಕತ್ತೆ ಕಾಯುತ್ತಿದ್ದೀರಾ, ಯಾವ ರೀತಿ ವ್ಯವಸ್ಥೆ ಮಾಡಿದ್ದೀರಾ ಎಂದು ಕಿಡಿಕಾರಿದರು.

ಕಪ್ಪು ಬಾವುಟ ಪ್ರದರ್ಶಿಸುವುದು ದೊಡ್ಡದ್ದಲ್ಲ. ಪೊಲೀಸರು, ಚೆಸ್ಕಾಂ ಸಿಬ್ಬಂದಿ ಕಾರ್ಯಕ್ರಮದ ಬಳಿಕ ಮೀಟಿಂಗ್ ಕರೆಯಲಿದ್ದು, ಎಲ್ಲರೂ ಹಾಜರಾಗಬೇಕು ಎಂದು ವೇದಿಕೆಯಲ್ಲೇ ಸೂಚಿಸಿದರು.

ವೇದಿಕೆ ಎರಡೂ ಬದಿಯಲ್ಲಿ ನಿಂತಿದ್ದ ಮುಖಂಡರಿಗೆ ಖುರ್ಚಿ ಹಾಕಿಸಿ ಯಾರೂ ನಿಲ್ಲಬಾರದು, ಜಂಜಾಟ ಮರೆತು ಕಾರ್ಯಕ್ರಮ ನೋಡಿ ಎಂದು ಸಚಿವರು ಹೇಳಿದರು.

ಶಾಸಕರಾದ ಸಿ‌.ಪುಟ್ಟರಂಗಶೆಟ್ಟಿ, ನಿರಂಜನ ಕುಮಾರ್, ಎನ್.ಮಹೇಶ್ ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.

ಹಿಂದಿನ ಲೇಖನಪಿಎಫ್’ಐ ಸಂಘಟನೆ ಹತ್ತಿಕ್ಕಲು ಪೊಲೀಸ್ ಇಲಾಖೆ ಕಾರ್ಯವೈಖರಿ ಶ್ಲಾಘನೀಯ: ವಿ‌.ಸುನಿಲ್ ಕುಮಾರ್
ಮುಂದಿನ ಲೇಖನವಿಶ್ವ ಪ್ರವಾಸೋದ್ಯಮ ಜಾಥಾಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಅವರಿಂದ ಚಾಲನೆ