ಚಾಮರಾಜನಗರ : ಲೋಕಸಭಾ ಚುನಾವಣೆಯ ಮತ ಎಣಿಕೆ ಈಗಾಗಲೇ ನಡೆಯುತ್ತಿದ್ದು, ಆರಂಭಿ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜು ಹಿನ್ನಡೆ ಅನುಭವಿಸಿದ್ದಾರೆ. ಅಂಚೆ ಮತಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿ ನಿಧಾನವಾಗಿ ಹಿನ್ನಡೆ ಅನುಭವಿಸಲು ಆರಂಭಿಸಿದರು. ಚಾಮರಾಜನಗರ ಮೊದಲ ಮತ್ತು ಎರಡನೇ ಸುತ್ತಿನ ಎಣಿಕೆ ಮುಕ್ತಾಯವಾದ ಬಳಿಕ ಎರಡು ಸುತ್ತಿನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಗೆ ಮುನ್ನಡೆಯಲ್ಲಿದ್ದರು. ಮೊದಲನೇ ಸುತ್ತಿನಲ್ಲಿ ೫೨೬೩ ಮತ್ತು ಎರಡನೇ ಸುತ್ತಿನಲ್ಲಿ ೨೫೫೭ ಮುನ್ನಡೆಯಲ್ಲಿದ್ದರು.
ಮೂರನೇ ಸುತ್ತಿನ ಎಣಿಕೆಯಲ್ಲಿ ಒಟ್ಟು ೧,೧೯,೩೮೯ ಮತಗಳನ್ನು ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ತಮ್ಮದಾಗಿಸಿಕೊಂಡರು. ಬಿಜೆಪಿ ಅಭ್ಯರ್ಥಿ ಬಾಲರಾಜು ೯೫,೮೫೬ ಮತಗಳನ್ನು ಪಡೆದರು.
೪ ನೇ ಸುತ್ತಿನಲ್ಲಿ ೨೪ ಸಾವಿರ ಲೀಡ್ ಸಾಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್, ಆರಂಭದಿಂದಲೂ ಸತತವಾಗಿ ಮುನ್ನಡೆ ಮತ ಹೆಚ್ಚಿಸಿಕೊಳ್ಳುತ್ತಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ. ಈವರೆಗೆ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ಗೆ ೧,೫೦,೭೦೧ ಮತ್ತು ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜುಗೆ ೧,೧೯,೯೨೨ ಮತಗಳು ಬಂದಿವೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.