ಮನೆ ಅಪರಾಧ ಚಾಮರಾಜನಗರ: ಲೋಕಾಯುಕ್ತ ದಾಳಿಗೆ ಹೆದರಿದ ಕಾರ್ಮಿಕ ಇಲಾಖೆ ನಿರೀಕ್ಷಕ ಪರಾರಿ

ಚಾಮರಾಜನಗರ: ಲೋಕಾಯುಕ್ತ ದಾಳಿಗೆ ಹೆದರಿದ ಕಾರ್ಮಿಕ ಇಲಾಖೆ ನಿರೀಕ್ಷಕ ಪರಾರಿ

0

ಚಾಮರಾಜನಗರ: ಲೋಕಾಯುಕ್ತ ದಾಳಿಗೆ ಹೆದರಿದ ಕಾರ್ಮಿಕ ಇಲಾಖೆ ನಿರೀಕ್ಷಕ ಕಚೇರಿಯಿಂದ ಪರಾರಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.

ಕೊಳ್ಳೇಗಾಲದ ಕಾರ್ಮಿಕ ಇಲಾಖೆಯ ನಿರೀಕ್ಷಕ ಚಂದ್ರು ಪರಾರಿಯಾದ ಅಧಿಕಾರಿ ಎಂದು ಗುರುತಿಸಲಾಗಿದೆ.

ಹನೂರು ತಾಲೂಕಿನ ರಾಮಾಪುರ ಗ್ರಾಮದ ಕಬ್ಬಿಣದ ಅಂಗಡಿ ವ್ಯಾಪಾರಿ ಲಕ್ಷ್ಮಣ್ ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಹಾಕಿದ ವೇಳೆ ಕಾರ್ಮಿಕ ಇಲಾಖೆಯ ನಿರೀಕ್ಷಕ ಚಂದ್ರು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಇವರ ಜತೆಗೆ ಮತ್ತೊಬ್ಬ ವ್ಯಾಪಾರಿಯೂ ಅಧಿಕಾರಿಯ ಲಂಚದಾಹದಿಂದ ಬೇಸತ್ತು ಲೋಕಾಯುಕ್ತರಿಗೆ ದೂರು ನೀಡಿದ್ದರು ಎನ್ನಲಾಗಿದೆ. ದೂರು ಪಡೆದ ಲೋಕಾಯುಕ್ತರು ಕಾರ್ಯಾಚರಣೆ ನಡೆಸಿದ್ದರು.