ಹಿಮಾಚಲ್ ಪ್ರದೇಶ್, ಮಂಡಿಯಲ್ಲಿ ನಾಮಪತ್ರ ಸಲ್ಲಿಸಿದ ಕಂಗನಾ ರಣಾವತ್..
ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾಮಾತೆಗೆ ಮೋದಿ ಪೂಜೆ.
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ "ನಮೋ"
ಬೆಳ್ಳಂಬೆಳಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಇಂದ ಗಂಧದಕಡ್ಡಿ ತಯಾರಿಕ ಘಟಕಕ್ಕೆ ಬೆಂಕಿ…
ನಂಜನಗೂಡಿನ ಗಂಧದಕಡ್ಡಿ ಕಾರ್ಖಾನೆಯಲ್ಲಿ ಬೆಂಕಿ…
ಮತದಾರನಿಗೆ YSR ಕಾಂಗ್ರೆಸ್ ಶಾಸಕನಿಂದ ಕಪಾಳ ಮೋಕ್ಷ…
ಮೋದಿ ಇಂದು ಪಟ್ನಾ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡಿದ್ರು
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ದೇವೇಗೌಡರು ಜೆಡಿಎಸ್ ಶಾಸಕ ಎ.ಮಂಜು ಹೇಳಿಕೆ.
HSRP ನಂಬರ್ ಪ್ಲೇಟ್ ಅಳವಡಿಸಿಲ್ವಾ ? ಹಾಗಿದ್ರೆ ದಂಡ ಬೀಳೋದು ಖಚಿತ…!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಚಾಮರಾಜನಗರ(Chamarajanagar): ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದ ವ್ಯಾಪ್ತಿಯಲ್ಲಿ ಮೃತಪಟ್ಟಿದ್ದ ಇಬ್ಬರು ಅಪರಿಚಿತರ ಅಂತ್ಯಸಂಸ್ಕಾರವನ್ನು ಪೊಲೀಸರು ನೆರವೇರಿಸಿ, ಮಾನವೀಯತೆ ಮೆರೆದಿದ್ದಾರೆ.
ಮಹದೇಶ್ವರ ಬೆಟ್ಟದಲ್ಲಿ ಇದೇ 7ರಂದು ಡಿ.ಮಾದರಿ ಕುಟೀರದ ಕೊಠಡಿ ಸಂಖ್ಯೆ 13ರ ಬಳಿ 35 ವರ್ಷದ ಅಪರಿಚಿತ ಪುರುಷನ ಶವ ಕಂಡು ಬಂದಿತ್ತು. ಆರೋಗ್ಯ ಕೇಂದ್ರದ ಪಕ್ಕದಲ್ಲಿ ಹೊಸದಾಗಿ ನಿರ್ಮಾಣ ಮಾಡಲಾಗಿರುವ ಹೋಟೆಲ್ ಮುಂಭಾಗ ಇದೇ 11ರಂದು ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು.
ಈ ಸಂಬಂಧ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಗರದ ಹೊರವಲಯದ ಯಡಬೆಟ್ಟದಲ್ಲಿರುವ ವೈದ್ಯಕೀಯ ಕಾಲೇಜಿನ ಶವಾಗಾರದಲ್ಲಿ ಮೃತದೇಹಗಳನ್ನು ಇಡಲಾಗಿತ್ತು.
ಮೃತಪಟ್ಟವರ ವಾರಸುದಾರರು ಪತ್ತೆಯಾಗದೇ ಇರುವುದರಿಂದ ಶವ ಪರೀಕ್ಷೆಯ ಬಳಿಕ, ನಗರಸಭೆಗೆ ಸೇರಿದ ಜಾಗದಲ್ಲಿ ಬೆಟ್ಟದ ಠಾಣೆಯ ಹೆಡ್ ಕಾನ್’ಸ್ಟೆಬಲ್ ಮಹೇಶ್ ಬಿ.ಎಂ ಹಾಗೂ ಸಿಬ್ಬಂದಿ ಬಸವರಾಜೇಂದ್ರ ಪಿ. ಮತ್ತು ಸಂಜು.ಎಚ್ ಅವರು ಅಂತ್ಯಸಂಸ್ಕಾರ ನೆರವೇರಿಸಿದರು.