ಮನೆ ಸ್ಥಳೀಯ ಚಾಮರಾಜನಗರ: ವ್ಯಕ್ತಿಯ ಮೇಲೆ ಹುಲಿ ದಾಳಿ, ಪ್ರಾಣಾಪಾಯದಿಂದ ಪಾರು!

ಚಾಮರಾಜನಗರ: ವ್ಯಕ್ತಿಯ ಮೇಲೆ ಹುಲಿ ದಾಳಿ, ಪ್ರಾಣಾಪಾಯದಿಂದ ಪಾರು!

0

ಚಾಮರಾಜನಗರ : ಚಾಮರಾಜನಗರದ ಬೇಡುಗುಳಿ ಸಮೀಪದ ರಾಮಯ್ಯನ ಪೋಡಿನಲ್ಲಿ ಸೋಮವಾರ ರಾತ್ರಿ ಬಹಿರ್ದೆಸೆಗೆ ಹೋಗಿದ್ದ ಸಂದರ್ಭ ಏಕಾಏಕಿ ಹುಲಿ ದಾಳಿ ಮಾಡಿದೆ.

ದಾಳಿಗೆ ಒಳಗಾದ ವ್ಯಕ್ತಿ ರವಿ ಎಂದು ತಿಳಿದು ಬಂದಿದ್ದು, ರಾತ್ರಿ ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಹುಲಿ ಏಕಾಏಕಿ ರವಿ ಮೇಲೆ ಎರಗಿದೆ. ಇದರಿಂದ ತಲೆಗೆ ಗಂಭೀರ ಗಾಯಗಳಾಗಿದ್ದು, ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೂಡಲೇ ಗಾಯಾಳು ರವಿ ಅವರನ್ನು ಚಾಮರಾಜನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೇಡುಗುಳಿಯ ರಾಮಯ್ಯನ ಪೋಡಿನಲ್ಲಿ ನಡೆದ ಹುಲಿ ದಾಳಿಯಿಂದಾಗಿ ನಿವಾಸಿಗಳು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದಾಳಿ ಮಾಡಿದ ಹುಲಿ ಸೆರೆಯಾಗುವ ತನಕ ತಾತ್ಕಾಲಿಕವಾಗಿ ಬೇಡುಗುಳಿಯಲ್ಲಿನ ಆಶ್ರಮ ಶಾಲೆಯಲ್ಲಿ ಆಶ್ರಯ ನೀಡುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.