ಮನೆ ಅಪರಾಧ ಇಂದು ಚಾಮರಾಜಪೇಟೆ ಬಂದ್: ಸೂಕ್ತ ಪೊಲೀಸ್ ಬಂದೋ ಬಸ್ತ್

ಇಂದು ಚಾಮರಾಜಪೇಟೆ ಬಂದ್: ಸೂಕ್ತ ಪೊಲೀಸ್ ಬಂದೋ ಬಸ್ತ್

0

ಬೆಂಗಳೂರು(Bengaluru):  ಚಾಮರಾಜಪೇಟೆ ಆಟದ ಮೈದಾನ ಕುರಿತ ವಿವಾದದ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಇಂದು ಬಂದ್ ಗೆ ಕರೆ ನೀಡಿದ್ದು, ಸೂಕ್ತ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿದೆ.

ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಸಂಪೂರ್ಣ ಬಂದ್ ಇರಲಿದೆ. ಹಾಲು, ತರಕಾರಿ, ಮೆಡಿಕಲ್ ಬಿಟ್ಟು ಉಳಿದೆಲ್ಲ ಅಂಗಡಿಗಳು ಮುಚ್ಚಿರಲಿವೆ.

457 ಪೊಲೀಸ್ ಸಿಬ್ಬಂದಿ ನಿಯೋಜನೆ:  ಸ್ಥಳದಲ್ಲಿ 457 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉನ್ನತಾಧಿಕಾರಿಗಳು ಭದ್ರತೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ: ಚಾಮರಾಜಪೇಟೆ ಮತ್ತು ಸುತ್ತಮುತ್ತಲಿನ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ ಶಾಲಾ ಕಾಲೇಜುಗಳಿಗೆ ಇನ್ನೂ ರಜೆ ಘೋಷಣೆ ಮಾಡಿಲ್ಲ. ಪರಿಸ್ಥಿತಿ ಅವಲೋಕಿಸಿಕೊಂಡು ನಿರ್ಧರಿಸುವ ಸಾಧ್ಯತೆಯಿದೆ ಎಂದು ಶಿಕ್ಷಕರೊಬ್ಬರು ತಿಳಿಸಿದ್ದಾರೆ.

ಶಾಸಕರ ಬೆಂಬಲ ಕೋರಿದ ಸಂಘಟನೆಗಳು: ಹಿಂದೂ ಸಂಘಟನೆಗಳ ಸದಸ್ಯರು ಈಗಾಗಲೇ ಚಾಮರಾಜಪೇಟೆ ಶಾಸಕ ಜಮೀರ್‌ ಅಹಮ್ಮದ್‌ ಖಾನ್‌ ಕಚೇರಿಗೆ ತೆರಳಿ ಬಂದ್‌ಗೆ ಬೆಂಬಲ ಕೋರಿದ್ದಾರೆ. ಜಮೀರ್‌ ಮನೆಯಲ್ಲಿ ಇಲ್ಲದ ಕಾರಣ ಆಪ್ತ ಸಹಾಯಕರಿಗೆ ಕರಪತ್ರ ನೀಡಲಾಗಿದೆ ಎಂದು ಹಿಂದೂ ಸಂಘಟನೆಗಳ ಸದಸ್ಯರು ತಿಳಿಸಿದ್ದಾರೆ.

ಹಿಂದಿನ ಲೇಖನಹೈಕೋರ್ಟ್‌ ನ್ಯಾಯಾಧೀಶರಿಗೆ ವರ್ಗಾವಣೆ ಬೆದರಿಕೆ: ಸುಪ್ರೀಂಕೋರ್ಟ್‌ನಲ್ಲಿ ಇಂದು ವಿಚಾರಣೆ
ಮುಂದಿನ ಲೇಖನಅಧಿಕಾರಿಗಳ ಅಸಹಕಾರ ಆರೋಪ: ಗ್ರಾಮ ಒನ್ ಪ್ರಾಂಚೈಸಿ ಹಿಂಪಡೆಯುತ್ತಿರುವ ಪ್ರತಿನಿಧಿಗಳು