ಮನೆ ರಾಜ್ಯ ಚಿತ್ರದುರ್ಗ: ಮುರುಘಾ ಶರಣರಿಗೆ ಎದೆನೋವು- ಜಿಲ್ಲಾಸ್ಪತ್ರೆಗೆ ದಾಖಲು

ಚಿತ್ರದುರ್ಗ: ಮುರುಘಾ ಶರಣರಿಗೆ ಎದೆನೋವು- ಜಿಲ್ಲಾಸ್ಪತ್ರೆಗೆ ದಾಖಲು

0

ಚಿತ್ರದುರ್ಗ(Chitrdurga): ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧಿತರಾಗಿ ಜೈಲು ಸೇರಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಇಂದು ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಬೆಳಿಗ್ಗೆ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದ್ದು, ಜೈಲು‌ ಸಿಬ್ಬಂದಿ ತಕ್ಷಣ ಅವರನ್ನು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ವಾಹನದಲ್ಲಿ ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದಾರೆ. ವೈದ್ಯರ ತಂಡ ಪರೀಕ್ಷೆ ನಡೆಸಿದೆ. ಎದೆನೋವು ಕಾಣಿಸಿಕೊಂಡಿದ್ದರಿಂದ ಇಸಿಜಿ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಶುಕ್ರವಾರ ಬೆಳಿಗ್ಗೆ ಜೈಲಿಗೆ ಬಂದ ಮಠದ ಸಿಬ್ಬಂದಿ ಶರಣರಿಗೆ ಮಾತ್ರೆ ಹಾಗೂ ಟೂತ್ ಬ್ರೆಷ, ಪೇಸ್ಟ್, ಬಟ್ಟೆ ನೀಡಿದ್ದಾರೆ. ಇದಾದ ಕೆಲ ಹೊತ್ತನ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ನಸುಕಿನ 3 ಗಂಟೆಯ ಹೊತ್ತಿಗೆ ಜೈಲು ಸೇರಿದ ಅವರು ನಿದ್ದೆ ಮಾಡಿರಲಿಲ್ಲ ಎನ್ನಲಾಗಿದೆ.

ಜೈಲುಪಾಲಾದ ಶಿವಮೂರ್ತಿ ಮುರುಘಾ ಶರಣರಿಗೆ ವಿಚಾರಣಾಧೀನ ಕೈದಿ ಸಂಖ್ಯೆ 2261 ನೀಡಲಾಗಿದೆ. ಜೈಲು ಸುತ್ತಲಿನ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಹಿಂದಿನ ಲೇಖನಭಾರತೀಯ ಅಂಚೆ ಇಲಾಖೆಯಲ್ಲಿದೆ ಉದ್ಯೋಗ: ಇಂದೇ ಅರ್ಜಿ ಸಲ್ಲಿಸಿ
ಮುಂದಿನ ಲೇಖನಹೂವಿನ ಹಡಗಲಿ ತಾ.ಪಂ ಗೆ ಅನ್ಯ ಇಲಾಖೆ ಅಧಿಕಾರಿ ನೇಮಕ ಖಂಡಿಸಿ ಪ್ರತಿಭಟನೆ