ಮನೆ ಸುದ್ದಿ ಜಾಲ ನ. 28 ರಂದು ನಂಜನಗೂಡಿನಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮ: ಜಿಲ್ಲಾಧಿಕಾರಿಗಳಿಂದ  ಸ್ಧಳ ಪರಿಶೀಲನೆ

ನ. 28 ರಂದು ನಂಜನಗೂಡಿನಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮ: ಜಿಲ್ಲಾಧಿಕಾರಿಗಳಿಂದ  ಸ್ಧಳ ಪರಿಶೀಲನೆ

0

ಮೈಸೂರು: ನ. 28 ರಂದು ನಂಜನಗೂಡು ಶ್ರೀ ಕಂಠೇಶ್ವರ ಸ್ವಾಮಿ ದೇವಸ್ಧಾನ ಸರ್ಕಾರದಿಂದ ಮಂಜೂರಾಗಿರುವ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ಹಾಗೂ ನುಗು ಏತ ನೀರಾವರಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಹಿಸುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಕಾರ್ಯಕ್ರಮ ನಡೆಯುವ ಸ್ಧಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾರ್ಯಕ್ರಮ ನಡೆಯುವ ಸ್ಧಳದಲ್ಲಿ ಬೇಕಾದ ಸೌಲಭ್ಯಗಳು, ಪೊಲೀಸ್ ಭದ್ರತೆ ಹಾಗೂ ಅಗತ್ಯ ವ್ಯವಸ್ಧೆಗಳ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.

ಇದಕ್ಕೆ ಮುನ್ನ ಜಿಲ್ಲಾಧಿಕಾರಿಗಳು ನಂಜನಗೂಡು ತಾಲ್ಲೂಕು ಕಚೇರಿಯಲ್ಲಿ ಮುಖ್ಯ ಮಂತ್ರಿಗಳ ನಂಜನಗೂಡು ಭೇಟಿ ಸಂಬಂಧ ಪೂರ್ವಭಾವಿ ಸಭೆ ನಡೆಸಿ ಸಾರ್ವಜನಿಕರ ಹಾಗೂ ರೈತರ ಅಹವಾಲು ಸ್ವೀಕರಿಸಿದರು

ಈ ಸಂದರ್ಭದಲ್ಲಿ ನಂಜನಗೂಡು ವಿಧಾನ ಸಭಾ ಶಾಸಕರಾದ ಹರ್ಷ ವರ್ಧನ್, ಜಿಲ್ಲಾ ಪೊಲೀಸ್ ವರಿಷ್ಠಾಧಕಾರಿಗಳಾದ ಚೇತನ್, ನಂಜನಗೂಡು ತಹಶೀಲ್ದಾರ್ ಶಿವಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದಿನ ಲೇಖನಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಅಸಮಾಧಾನ ಹೊರಹಾಕಿದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ
ಮುಂದಿನ ಲೇಖನಕ್ರಿಮಿನಲ್ ಮೇಲ್ಮನವಿ, ಭೂಸ್ವಾಧೀನ, ತೆರಿಗೆ, ಅಪಘಾತ ಪ್ರಕರಣಗಳ ವಿಚಾರಣೆಗೆ ಮುಂದಿನ ವಾರ 4 ವಿಶೇಷ ಪೀಠ: ಸಿಜೆಐ