ಮನೆ ರಾಜ್ಯ ಚಿಕ್ಕಮಗಳೂರು: ಅಪಘಾತವಾದ ಕಾರಿನಲ್ಲಿ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್, ಕತ್ತಿ, ಮದ್ಯದ ಪ್ಯಾಕೆಟ್ ಗಳು ಪತ್ತೆ

ಚಿಕ್ಕಮಗಳೂರು: ಅಪಘಾತವಾದ ಕಾರಿನಲ್ಲಿ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್, ಕತ್ತಿ, ಮದ್ಯದ ಪ್ಯಾಕೆಟ್ ಗಳು ಪತ್ತೆ

0

ಚಿಕ್ಕಮಗಳೂರು: ನಗರದ ಎಐಟಿ ವೃತ್ತ ಬಳಿ ಭಾನುವಾರ ರಾತ್ರಿ ಅಪಘಾತಕೀಡಾಗಿದ್ದ ಕಾರಿನಲ್ಲಿ ಶಾಸಕ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್ ಗಳು, ಮದ್ಯದ ಪ್ಯಾಕೆಟ್ ಗಳು, ಕತ್ತಿ (ಲಾಂಗ್) ಸಿಕ್ಕಿವೆ.

ಕಾರು, ಚಾಲಕ ಮಂಜುನಾಥ, ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರು ಮತ್ತು ಜೀಪು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಮದ್ಯದ ಪೊಟ್ಟಣಗಳು, ಕತ್ತಿ, ಶಾಸಕ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್ ಗಳು ಪತ್ತೆಯಾಗಿವೆ. ಸ್ಥಳೀಯರು ಮತ್ತು ಕಾರಿನಲ್ಲಿದ್ದವರು ಪರಸ್ಪರ ವಾಗ್ವಾದ ಮಾಡಿದ್ದಾರೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ಲೇಖನರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಜೊತೆ ಕಾಂಗ್ರೆಸ್ ನಾಯಕರ ಚರ್ಚೆ
ಮುಂದಿನ ಲೇಖನನ್ಯಾಯಮೂರ್ತಿ ಸದಾಶಿವ ವರದಿ ಕೇಂದ್ರಕ್ಕೆ ಶಿಫಾರಸು ಮಾಡುವ ಸರ್ಕಾರದ ನಿರ್ಧಾರಕ್ಕೆ ವಿರೋಧ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ