ಮನೆ ರಾಜ್ಯ ಚಿಕ್ಕಮಗಳೂರು: ಕರ್ನಾಟಕ ಬ್ಯಾಂಕ್​ ಎಟಿಎಂಗೆ ಬೆಂಕಿ- 5 ಲಕ್ಷ ಹಣ ಭಸ್ಮ

ಚಿಕ್ಕಮಗಳೂರು: ಕರ್ನಾಟಕ ಬ್ಯಾಂಕ್​ ಎಟಿಎಂಗೆ ಬೆಂಕಿ- 5 ಲಕ್ಷ ಹಣ ಭಸ್ಮ

0

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ IG ರಸ್ತೆಯ ಸಾರಗೋಡು ಆರ್ಕೆಡ್​ ನಲ್ಲಿರುವ ಕರ್ನಾಟಕ ಬ್ಯಾಂಕ್​ನ  ಶಾಖೆಯ ಕೆಳಭಾಗದಲ್ಲಿರುವ ಎಟಿಎಂಗೆ ಬೆಂಕಿ ಹೊತ್ತಿಕೊಂಡಿದ್ದು, 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಸಂಪೂರ್ಣ ಭಸ್ಮವಾಗಿದೆ.

Join Our Whatsapp Group

ಶಾರ್ಟ್ ಸರ್ಕ್ಯೂಟ್ ​ನಿಂದ ಎಟಿಎಂಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಎಟಿಎಂಗೆ ಬೆಂಕಿ ಹೊತ್ತಿಕೊಂಡ ವಿಚಾರವನ್ನು ಹೈದರಾಬಾದ್ ಬ್ಯಾಂಕ್ ಕಂಟ್ರೋಲ್ ರೂಮ್​ ಅಗ್ನಿಶಾಮಕ ದಳಕ್ಕೆ ತಿಳಿಸಿದೆ.

ಮಾಹಿತಿ ಬಂದ ಕೂಡಲೆ ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಿಂದಿನ ಲೇಖನಭಾರತದ ಕಲ್ಪನೆಯನ್ನು ಎಂದಿಗೂ ವಿರೂಪಗೊಳಿಸಲು ಬಿಡದಿರಿ: ನ್ಯಾ. ಅಕಿಲ್ ಕುರೇಶಿ ಮನವಿ
ಮುಂದಿನ ಲೇಖನಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ: ಅಪಾಯದಿಂದ ಪಾರು