ಮನೆ ರಾಜ್ಯ ಚಿಕ್ಕಮಗಳೂರು: ನರಹಂತಕ ಕಾಡಾನೆ ಸೆರೆ ಹಿಡಿಯಲು ಆದೇಶ

ಚಿಕ್ಕಮಗಳೂರು: ನರಹಂತಕ ಕಾಡಾನೆ ಸೆರೆ ಹಿಡಿಯಲು ಆದೇಶ

0

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮೂವರನ್ನು ಬಲಿ ಪಡೆದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಆದೇಶಿಸಲಾಗಿದೆ.

ಮಲೆನಾಡಲ್ಲಿ ಮೂರು ಕಾಡಾನೆಗಳನ್ನು ಹಿಡಿಯಲು ಆದೇಶಿಸಿದ್ದು, ಇಂದಿನಿಂದಲೇ ನರಹಂತಕ ಕಾಡಾನೆ ಸೇರಿದಂತೆ 2 ಕಾಡಾನೆ ಸೆರೆ ಕಾರ್ಯಾಚರಣೆ ನಡೆಸಲಾಗುತ್ತಿದೆ.

ನಿರಂತರ ಕಾಡಾನೆ ದಾಳಿಯಿಂದ ಮೂಡಿಗೆರೆ ಜನರು ತತ್ತರಿಸಿದ್ದು, ಜನರ ಆಕ್ರೋಶ, ಪ್ರತಿಭಟನೆ ಹಿನ್ನೆಲೆ ಆನೆ ಸೆರೆಹಿಡಿಯಲು ಆದೇಶಿಸಲಾಗಿದ್ದು, ಪುಂಡಾನೆಗಳನ್ನು ಸೆರೆಹಿಡಿದು ರೆಡಿಯೋ ಕಾಲರಿಂಗ್ ಅಳವಡಿಸಲು ಸೂಚಿಸಲಾಗಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಸಾಕಾನೆಗಳ ಮೂಲಕ ಒಂಟಿ ಸಲಗ ಸೆರೆಹಿಡಿಯುವ ಕಾರ್ಯಾಚರಣೆ ನಡೆಸಲಾಗಿದ್ದು, ಆನೆಯನ್ನು ಸೆರೆ ಹಿಡಿದು ಭದ್ರಾ ಸಂರಕ್ಷಿತಾ ಪ್ರದೇಶಕ್ಕೆ ಸ್ಥಳಾಂತರಿಸಲು ಆದೇಶಿಸಲಾಗಿದೆ.

ಹಿಂದಿನ ಲೇಖನರಿಷಬ್‌ ಶೆಟ್ಟಿ ನಿರ್ದೇಶನದ ‘ಕಾಂತಾರ’ ಪ್ರೀಕ್ವೆಲ್‌ ಫಸ್ಟ್ ಲುಕ್ ನ.27 ರಂದು ಬಿಡುಗಡೆ
ಮುಂದಿನ ಲೇಖನಅಮಿತ್ ಶಾ ಬಂದು ಮನೆಯಲ್ಲಿ ಕೂತು ಜೀವ ತೆಗೆದ್ರು: ಸಿದ್ದಗಂಗಾ ಶ್ರೀಗಳ ಮುಂದೆ ನೋವು ತೋಡಿಕೊಂಡ ವಿ.ಸೋಮಣ್ಣ