ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
ITBT ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆರ್ಜಿ ಸ್ವೀಕಾರ..!
'ಓಲ್ಡ್ ಈಸ್ ಗೋಲ್ಡ್' ಕರೋಕೆ ಗಾಯನ ಕಾರ್ಯಕ್ರಮ
ಅಪ್ಪ ಅಮ್ಮ ಅಪ್ಪು, ಎಂಬ ಚಿತ್ರದ ಧ್ವನಿಸುರುಳಿ ಬಿಡುಗಡೆ
ಭಾರತೀಯ ನ್ಯಾಯ ಸಮಿತಿ 2023 ಜುಲೈ 1, 2024 ರಿಂದ ಜಾರಿ!
ಮೈಸೂರಿನ ವಾಸನ್ ಐ ಕೇರ್ ನ 14ನೇ ವಾರ್ಷಿಕೋತ್ಸವದ ಆಚರಣೆ
"ವಾಲ್ಮೀಕಿ ಅಭಿವೃದ್ಧಿ ನಿಗಮ" ದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಬೃಹತ್ ಪ್ರತಿಭಟನೆ
ಮೈಸೂರಿನಲ್ಲಿ,"ದಿ ಜ್ಯುವೆಲರಿ ಶೋ" ಉದ್ಘಟಿಸಿದ ನಟಿ ಆರಾಧನ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ತಮ್ಮ ಪೋಷಕರಿಗೆ ಪೆನ್ನು ಮತ್ತಿತರ ಸಣ್ಣ ವಸ್ತುಗಳನ್ನು ಮಾರಾಟ ಮಾಡಲು ಸಹಾಯ ಮಾಡುವ ಮಕ್ಕಳನ್ನು ಬಾಲಕಾರ್ಮಿಕರೆಂದು ಪರಿಗಣಿಸಲಾಗದು. ಹೀಗಾಗಿ ಬೀದಿಗಳಲ್ಲಿ ವಸ್ತುಗಳನ್ನು ಮಾರಾಟ ಮಾಡುವ ವಲಸೆ ಪೋಷಕರ ಮಕ್ಕಳನ್ನು ಪೊಲೀಸ್ ಮತ್ತು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ವಶಕ್ಕೆ ತೆಗೆದುಕೊಳ್ಳುವಂತಿಲ್ಲ ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ಹೇಳಿದೆ .
[ಪಪ್ಪು ಬವಾರಿಯಾ ಮತ್ತು ಜಿಲ್ಲಾಧಿಕಾರಿ ಸಿವಿಲ್ ಸ್ಟೇಷನ್ ಇನ್ನಿತರರ ನಡುವಣ ಪ್ರಕರಣ].
ಆದರೆ, ಮಕ್ಕಳನ್ನು ರಸ್ತೆಯಲ್ಲಿ ಅಲೆದಾಡಿಸುವ ಬದಲು ವಿದ್ಯಾಭ್ಯಾಸಕ್ಕೆ ಕಳುಹಿಸಬೇಕು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ನ್ಯಾ. ವಿ ಜಿ ಅರುಣ್ ಸ್ಪಷ್ಟಪಡಿಸಿದರು.
“ಪೆನ್ನು ಮತ್ತಿತರ ಸಣ್ಣ ವಸ್ತುಗಳನ್ನು ಮಾರಾಟ ಮಾಡಲು ತಮ್ಮ ಪೋಷಕರಿಗೆ ಸಹಾಯ ಮಾಡುವ ಮಕ್ಕಳ ಚಟುವಟಿಕೆಯು ಬಾಲ ಕಾರ್ಮಿಕತನ ಹೇಗಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾನು ಸೋತಿದ್ದೇನೆ. ಮಕ್ಕಳನ್ನು ಪೋಷಕರೊಂದಿಗೆ ಅಡ್ಡಾಡಲು ಬಿಡುವ ಬದಲು ಅವರಿಗೆ ಶಿಕ್ಷಣ ನೀಡಬೇಕು” ಎಂದು ಪೀಠ ಹೇಳಿತು.
ಬಡತನದ ಬಗ್ಗೆ ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ನೀಡಿದ್ದ ಹೇಳಿಕೆಯೊಂದನ್ನೂ ನ್ಯಾಯಾಲಯ ಉಲ್ಲೇಖಿಸಿದೆ. “ಬಡವನಾಗಿರುವುದು ಅಪರಾಧವಲ್ಲ ಎಂಬ ರಾಷ್ಟ್ರಪಿತಾಮಹನ ಸಾಲನ್ನು ಉಲ್ಲೇಖಿಸುವುದಾದರೆ ಬಡತನ ಹಿಂಸೆಯ ಅತಿಕೆಟ್ಟ ರೂಪವಾಗಿದೆ” ಎಂದಿತು.
ರಾಜಸ್ಥಾನ ಮೂಲದ ಪೋಷಕರು ತಮ್ಮ ಇಬ್ಬರು ಮಕ್ಕಳನ್ನು ತಮ್ಮ ಸುಪರ್ದಿಗೆ ಒಪ್ಪಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಅಭಿಪ್ರಾಯವ್ಯಕ್ತಪಡಿಸಿತು.
“ಆದರೆ ಪೊಷಕರು ಅಲೆಮಾರಿ ಜೀವನ ನಡೆಸುತ್ತಿರುವಾಗ ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದಾದರೂ ಹೇಗೆ” ಎಂದು ನ್ಯಾಯಾಲಯ ಆಶ್ಚರ್ಯವ್ಯಕ್ತಪಡಿಸಿತು.
“ವಸ್ತುಗಳನ್ನು ಮಾರಾಟ ಮಾಡಲು ಮಕ್ಕಳನ್ನು ಬೀದಿಗೆ ಬಿಡುವುದಿಲ್ಲ. ಅವರಿಗೆ ಶಿಕ್ಷಣ ಕೊಡಿಸುವುದಾಗಿ ಸಂವಾದದ ವೇಳೆ ಅರ್ಜಿದಾರರು ಹೇಳಿದ್ದಾರೆ. ಪೋಷಕರೇ ಅಲೆಮಾರಿ ಜೀವನ ನಡೆಸುತ್ತಿರುವಾಗ ಮಕ್ಕಳಿಗೆ ಸರಿಯಾದ ಶಿಕ್ಷಣವನ್ನು ಹೇಗೆ ಒದಗಿಸಬಹುದು ಎಂದು ಅಚ್ಚರಿಯಾಗುತ್ತಿದೆ” ಎಂಬುದಾಗಿ ನ್ಯಾಯಮೂರ್ತಿಗಳು ಹೇಳಿದರು.
ವಿಚಾರಣೆಯ ಕೊನೆಗೆ ಪುನರ್ವಸತಿ ಕೇಂದ್ರದಲ್ಲಿದ್ದ ಇಬ್ಬರು ವಲಸೆ ಮಕ್ಕಳನ್ನು ಬಿಡುಗಡೆ ಮಾಡಲು ಅದು ಆದೇಶಿಸಿತು. ಪ್ರಕರಣದ ಮುಂದಿನ ವಿಚಾರಣೆ ಇಂದು ಮುಂದುವರೆಯಲಿದೆ.