ಮನೆ ರಾಜ್ಯ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ‘ಡಿಕೆ ಶಿವಕುಮಾರ್ ಹೊಣೆ ಹೊರಬೇಕು’: ಜೆಡಿಎಸ್ ವಾಗ್ದಾಳಿ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ: ‘ಡಿಕೆ ಶಿವಕುಮಾರ್ ಹೊಣೆ ಹೊರಬೇಕು’: ಜೆಡಿಎಸ್ ವಾಗ್ದಾಳಿ

0

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದ ಬಳಿಕ, ಜೆಡಿಎಸ್ ಪಕ್ಷ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದೆ. ಅಧಿಕಾರದ ದುರಾಸೆ ಹಾಗೂ ಆರ್‌ಸಿಬಿ ಗೆಲುವಿನಲ್ಲಿ ಪ್ರಚಾರ ಪಡೆಯಲು ಹೋಗಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ.

ಜೆಡಿಎಸ್ ಪಕ್ಷದ ವಕ್ತಾರರು ಸಾಮಾಜಿಕ ಜಾಲತಾಣ ‘ಎಕ್ಸ್’ (ಹಳೆಯ ಟ್ವಿಟ್ಟರ್)ನಲ್ಲಿ ಡಿಕೆಶಿ ವಿರುದ್ಧ ಕಿಡಿಕಾರಿದ್ದು, ಅವರ ವಿರುದ್ಧ ಧಿಕ್ಕಾರ ಘೋಷಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಆರ್‌ಸಿಬಿ ತಂಡದ ಆಟಗಾರರಿಗೆ ಸನ್ಮಾನ ಕಾರ್ಯಕ್ರಮ ಮಾಡಬಹುದಿತ್ತು. ಅದನ್ನು ಬಿಟ್ಟು ಕಾಂಗ್ರೆಸ್ ಸರ್ಕಾರ ವಿಧಾನಸೌಧದ ಮುಂದೆ ಆತುರಾತುರವಾಗಿ ಕಾರ್ಯಕ್ರಮ ಆಯೋಜಿಸಿ ಆರ್‌ಸಿಬಿ ತಂಡದ ಜೊತೆ ಸಿಎಂ, ಡಿಸಿಎಂ, ಸಚಿವರು ಮತ್ತವರ ಮಕ್ಕಳ ಫೋಟೋಶೂಟ್ ಮಾಡಿಸುವ ಶೋಕಿಗೆ ಮುಗ್ಧರು ಪ್ರಾಣ ಕಳೆದುಕೊಳ್ಳುವಂತೆ ಮಾಡಿರುವುದು ಘೋರ ದುರಂತ.

ಸರ್ಕಾರದ ಈ ನಿರ್ಲಕ್ಷ್ಯದಿಂದ 11 ಮಂದಿ ಅಭಿಮಾನಿಗಳು ಉಸಿರು ನಿಲ್ಲಿಸಿದ್ದಾರೆ ಎಂದು ಬಿಜೆಪಿ, ಜೆಡಿಎಸ್ ಪಕ್ಷಗಳ ವಾಗ್ದಾಳಿ ಜೋರಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಹತ್ತಾರು ಸಾವಿರ ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಸೇರಿದ್ದ ವೇಳೆ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳದೇ ನಿರ್ಲಕ್ಷ್ಯ ತೋರಿರುವುದು ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಜಗಜ್ಜಾಹೀರುಗೊಳಿಸಿದೆ. ಕಾಲ್ತುಳಿತ ದುರಂತದಲ್ಲಿ 11 ಜನರ ಸಾವಿಗೆ ಡಿಸಿಎಂ ಡಿಕೆಶಿಯೇ ಹೊಣೆ ಹೊರಬೇಕು ಎಂದು ಆಗ್ರಹಿಸಿದೆ.

ಕಾಲ್ತುಳಿತ ಪ್ರಕರಣದ ತನಿಖೆ ಈಗ ನ್ಯಾಯಾಂಗ ಮಟ್ಟಕ್ಕೆ ತಲುಪಿದ್ದು, ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ.