ಮನೆ ರಾಜ್ಯ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಮೂವರು ಐಪಿಎಸ್ ಅಧಿಕಾರಿಗಳ ಅಮಾನತಿಗೆ ಕೇಂದ್ರದಿಂದ ಅನುಮೋದನೆ

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಮೂವರು ಐಪಿಎಸ್ ಅಧಿಕಾರಿಗಳ ಅಮಾನತಿಗೆ ಕೇಂದ್ರದಿಂದ ಅನುಮೋದನೆ

0

ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.

ಆರ್‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿತ್ತು. ಪರಿಣಾಮ 11 ಮಂದಿ ಸಾವನ್ನಪ್ಪಿದರು. ಈ ಹಿನ್ನೆಲೆ ಕರ್ತವ್ಯ ಲೋಪ ಆರೋಪದಡಿ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನಿಸಿತ್ತು.

ಇದೀಗ ರಾಜ್ಯ ಸರ್ಕಾರದ ವರದಿಯನ್ನು ಕೇಂದ್ರ ಅಂಗೀಕರಿಸಿದ್ದು, ಡಿಪಿಎಆರ್‌ಗೆ ಮಾಹಿತಿ ರವಾನೆ ಮಾಡಿದೆ. ದಯಾನಂದ್, ವಿಕಾಸ್ ಕುಮಾರ್ ಮತ್ತು ಶೇಖರ್ ಎಂಬ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಕರ್ತವ್ಯ ಲೋಪ ಆರೋಪದಡಿ ಅಮಾನತುಗೊಳಿಸಿತ್ತು.