ಬೆಂಗಳೂರು : ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಿಂದ ಭಾರೀ ನೋವು ಅನುಭವಿಸಿದ್ದ ಆರ್ಸಿಬಿ ಆಡಳಿತ ಮಂಡಳಿ ಈಗ ಅಭಿಮಾನಿಗಳಿಗಾಗಿ ಕೇರ್ ಸೆಂಟರ್ ತೆರೆಯಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆರ್ಸಿಬಿ ಪೋಸ್ಟ್ ಮಾಡಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಒಂದು ಕಾಲದಲ್ಲಿ ಅಭಿಮಾನಿಗಳು ಹೆಚ್ಚು ಸಂಭ್ರಮದಿಂದ ಕಳೆದ ಸ್ಥಳವಾಗಿದ್ದು, ಆದರೆ ಜೂ.4ರಂದು ಸಂಭವಿಸಿದ ದುರ್ಘಟನೆಯಿಂದ ಆ ಸಂಭ್ರಮ ಮರೆಯಾಗಿದೆ. ಆ ದಿನ ನಮ್ಮ ಹೃದಯ ಚೂರಾಯಿತು. ಈ ಸಂಕಟವನ್ನು ನಾವು 3 ತಿಂಗಳ ಕಾಲ ಮೌನವಾಗಿ ಅನುಭವಿಸಿದ್ದೇವೆ.
ಈ ದುರ್ಘಟನೆಯಿಂದ ಸಾಕಷ್ಟು ಕಲಿತಿದ್ದೇವೆ. ಇದಕ್ಕಾಗಿಯೇ ನಾವು ಅಭಿಮಾನಿಗಳ ಜೊತೆ ನಿಲ್ಲಲು ನಿರ್ಧರಿಸಿದ್ದೇವೆ. ಇದೇ ಕಾರಣಕ್ಕೆ ಅಭಿಮಾನಿಗಳಿಗಾಗಿ ಕೇರ್ ಸೆಂಟರ್ ತೆರೆಯಲು ನಿರ್ಧರಿಸಲಾಗಿದೆ. ಈ ಮೂಲಕ ಕರ್ನಾಟಕದ ಹೆಮ್ಮೆಯಾಗಿ ಮುಂದುವರಿಯುತ್ತೇವೆ. ಈ ಬಗ್ಗೆ ಹೆಚ್ಚಿನ ವಿವರ ಶೀಘ್ರದಲ್ಲೇ ಹಂಚಿಕೊಳ್ಳುತ್ತೇವೆ ಎಂದು ಆರ್ಸಿಬಿ ಅಭಿಮಾನಿಗಳಿಗೆ ಪತ್ರ ಬರೆದಿ ಪೋಸ್ಟ್ ಮಾಡಿದೆ.















