ಮಂಗಳೂರು(Mangalore): ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಬ್ ಇನ್ಸ್ಪೆಕ್ಟರ್ ಜ್ಯೋತಿ ಬಾಯಿ (33) ಅವರು ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ.
ಜ್ಯೋತಿ ಅವರು 2010ನೇ ತಂಡದ ಅಧಿಕಾರಿ. ಅವರ ಪತಿ ಓಂಬೀರ್ ಸಿಂಗ್ ಪರ್ಮಾರ್ ಅವರು ಮಂಗಳೂರು ರಿಫೈನರೀಸ್ ಆ್ಯಂಡ್ ಪೆಟ್ರೊ ಕೆಮಿಕಲ್ಸ್ (ಎಂಆರ್ಪಿಎಲ್) ಸಂಸ್ಥೆಯಲ್ಲಿ ಸಹಾಯಕ ಕಮಾಂಡಂಟ್ ಆಗಿದ್ದಾರೆ. ಅವರಿಬ್ಬರೂ ರಾಜಸ್ತಾನದ ಭರತಪುರ ಜಿಲ್ಲೆಯವರು.
ಕೌಟುಂಬಿಕ ಕಾರಣದಿಂದಾಗಿ ಜ್ಯೋತಿ ಅವರು ಬುಧವಾರ ಬೆಳಿಗ್ಗೆ 6ರಿಂದ 6.15ರ ನಡುವೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗಾಗಿ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಶಸ್ತ್ರಚಿಕಿತ್ಸೆ ನಡೆಯುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದರು.
ಆತ್ಮಹತ್ಯೆಗೆ ಯತ್ನಿಸುವ ಮುನ್ನ ಜ್ಯೋತಿ ಅವರು ಪತ್ರವೊಂದನ್ನು ಬರೆದಿದ್ದಾರೆ. ಅದರಲ್ಲಿ, ಕ್ಷಮಿಸು ಅಮ್ಮಾ. ನಾನು ಸ್ವಇಚ್ಛೆಯಿಂದಲೇ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದೇನೆ. ಯಾರೂ ನನಗೆ ಒತ್ತಡ ಹಾಕಿಲ್ಲ ಎಂದು ಹಿಂದಿಯಲ್ಲಿ ಬರೆದು ದಿನಾಂಕವನ್ನೂ ನಮೂದಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಶಾಲೆಗೆ ಕುಡಿದು ಬರುತ್ತಿದ್ದ ಶಿಕ್ಷಕ ; ಚಪ್ಪಲಿ – ಶೂ ಎಸೆದು ಓಡಿಸಿದ ವಿದ್ಯಾರ್ಥಿಗಳು
ಮತದಾರರಿಗೆ ' ಸಿಹಿ ', ಸುದ್ದಿ..
ಮೋದಿ ಅಭಿಮಾನಿಯ ಕೋರಿಕೆ…
ಪ್ರಸ್ತುತ ಪೊಲೀಸ್ ವ್ಯವಸ್ಥೆಯನ್ನು ಅಣುಕಿಸುತ್ತಿರುವ ಕಾಲ್ಪನಿಕ ಸನ್ನಿವೇಶಗಳು..
ಅಭಿಮಾನಿ ದೇವರುಗಳ ಜೊತೆ ಜಾಕಿ ಚಲನಚಿತ್ರ ವೀಕ್ಷಿಸಿದ ಅಶ್ವಿನಿ ಪುನೀತ್
ಮೈಸೂರು ಮೆಡಿಕಲ್ ಕಾಲೇಜು ಮತ್ತು ಕೆ ಆರ್ ಆಸ್ಪತ್ರೆಯ ಕರ್ಮಕಾಂಡ
ಕರ್ನಾಟಕದ ಹೆಮ್ಮೆಯ ರತ್ನ ಶ್ರೀಮತಿ ಸುಧಾಮೂರ್ತಿಯವರು ರಾಜ್ಯಸಭಾ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.