ಉತ್ತರ ಕನ್ನಡ: ಜಿಲ್ಲೆಯ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ನಂದಿ ಮಂಟಪದಲ್ಲಿ ತೀರ್ಥ ನೀಡುವ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆಯಾಗಿದೆ.
ಈ ಹಿನ್ನೆಲೆ ಏಳು ದಿನದವರೆಗೆ ಯಥಾ ಸ್ಥಿತಿ ಮುಂದುವರೆಸುವಂತೆ ಕುಮಟಾ ಸಹಾಯಕ ಆಯುಕ್ತೆ ಕಲ್ಯಾಣಿ ಕಾಂಬ್ಳೆ ಅವರು ಸೂಚನೆ ನೀಡಿದ್ದಾರೆ. ಅದರಂತೆ ಎಸಿ ಸೂಚನೆ ಹಿನ್ನೆಲೆ ಜಂಬೆ ಮನೆತನದ ಅರ್ಚಕರು ನಂದಿ ಮಂಟಪದಲ್ಲಿ ತೀರ್ಥ ನೀಡುವ ಕಾಯಕ ಮುಂದುವರೆಸಿದ್ದಾರೆ.
ಇನ್ನು ಸಹಾಯಕ ಆಯುಕ್ತರ ಮಧ್ಯಸ್ಥಿಕೆಯಲ್ಲಿ ದೇವಸ್ಥಾನದ ಗರ್ಭಗುಡಿಯಲ್ಲಿ ಪ್ರತಿಭಟನೆಗಿಳಿದಿದ್ದ ಗೋಪಿ ಮನೆತನದ ಅರ್ಚಕರು ಸಧ್ಯ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದಾರೆ. ದೇವಸ್ಥಾನದ ನಂದಿ ಮಂಟಪದಲ್ಲಿ ತೀರ್ಥ ನೀಡುವ ವಿಚಾರವಾಗಿ ಜಂಬೆ ಮನೆತನ ಹಾಗೂ ಗೋಪಿ ಮನೆತನದ ನಡುವೆ ಇಂದು(ಮೇ.09) ವಿವಾದ ಏರ್ಪಟ್ಟಿತ್ತು. ನಿಗದಿಯಂತೆ ಜಂಬೆ ಮನೆತನ ಗೋಪಿ ಮನೆತಕ್ಕೆ ತೀರ್ಥ ನೀಡುವ ಕಾಯಕ ವಹಿಸುವಂತೆ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಗೋಪಿ ಮನೆತನದ ಅರ್ಚಕರು ಪ್ರತಿಭಟನೆಗಿಳಿದಿದ್ದರು.
ಈ ಹಿಂದೆ ಕೂಡ ನಂದಿ ಮಂಟಪದಲ್ಲಿ ತೀರ್ಥ ನೀಡುವ ಹಾಗೂ ಆರತಿ ತಟ್ಟೆಯ ಕಾಸಿನ ಹಕ್ಕಿಗಾಗಿ ಅರ್ಚಕರು ಕೋರ್ಟ್ ಮೆಟ್ಟಿಲೇರಿದ್ದರು. ಇದರ ಬೆನ್ನಲ್ಲೇ ಇದೀಗ ತೀರ್ಥ ನೀಡುವ ವಿಚಾರಕ್ಕಾಗಿ ಎರಡು ಮನೆತನದ ನಡುವೆ ಗಲಾಟೆ ಶುರುವಾಗಿದೆ. ಈ ಹಿನ್ನಲೆ ಎಚ್ಚೆತ್ತ ಎಸಿ ಅವರು ಕೂಡಲೇ ಮಧ್ಯಸ್ಥಿಕೆ ವಹಿಸಿ ಭಕ್ತರಿಗೆ ದೇವರ ದರ್ಶನಕ್ಕೆ, ಪೂಜೆಗೆ ಅಡ್ಡಿಯಾಗಿದ್ದಂತೆ ಸಮಸ್ಯೆಯನ್ನು ನಿವಾರಣೆ ಮಾಡಿದ್ದಾರೆ.
ಮೋದಿ ನೇತೃತ್ವದ BJP 430 ಸೀಟ್ ಗೆಲ್ಲುತ್ತೆ ಎಂದ ಚೀನಾ….
ನಮ್ಮ ಹೆಮ್ಮೆಯ ಮೈಸೂರು
ಒಂದು ಅದ್ಭುತ. ಫುಟ್ಬಾಲ್ನ ಸಂಯೋಜನೆ..
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.