ಮನೆ ಮನರಂಜನೆ ಚಾರ್ಲಿ ಸಿನಿಮಾ ನೋಡಿ ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ

ಚಾರ್ಲಿ ಸಿನಿಮಾ ನೋಡಿ ಕಣ್ಣೀರಿಟ್ಟ ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ರಾಜ್ಯದಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿರುವ ನಟ ರಕ್ಷಿತ್‌ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾ ವಿಮರ್ಶಕರು, ಪ್ರೇಕ್ಷಕರು ಮತ್ತು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ‌.

ಶ್ವಾನ ಪ್ರೇಮಿ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಹದ್ಯೋಗಿಗಳ ಜೊತೆಯಲ್ಲಿ ಒರಾಯನ್ ಮಾಲ್‌ನಲ್ಲಿ ‘777 ಚಾರ್ಲಿ’ ಸಿನಿಮಾವನ್ನು ವೀಕ್ಷಣೆ ಮಾಡಿದ್ದಾರೆ. ಸಿನಿಮಾ ನೋಡಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವುಕರಾಗಿದ್ದಾರೆ.

ಸಿನಿಮಾ ಕೊನೆಯಲ್ಲಿ ‘ಚಾರ್ಲಿ‘ ಶ್ವಾನ ಸಾವನ್ನಪ್ಪುತ್ತದೆ. ಈ ಸನ್ನಿವೇಶವನ್ನು ನೆನೆದು ಅವರು ದುಃಖಿತರಾದರು. ಆ ಕ್ಷಣದಲ್ಲಿ ದು:ಖವನ್ನು ತಡೆಯದೇ ಮಕ್ಕಳಂತೆ ಗಳಗಳನೇ ಅತ್ತುಬಿಟ್ಟರು ಎಂದು ತುಳಜಾ ಪವಾರ್‌ ಎಂಬುವವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಉಡುಪಿ ಶಾಸಕ ರಘುಪತಿ ಭಟ್, ಸಚಿವರಾದ ಆರ್‌.ಅಶೋಕ್, ಬಿ.ಸಿ.ನಾಗೇಶ್, ನಿರ್ದೇಶಕ ಕಿರಣ್ ರಾಜ್, ನಟ ರಕ್ಷಿತ್ ಶೆಟ್ಟಿ, ನಟಿ ಸಂಗೀತಾ ಶೃಂಗೇರಿ ಅವರೊಂದಿಗೆ ಮುಖ್ಯಮಂತ್ರಿಗಳು ಸಿನಿಮಾ ವೀಕ್ಷಿಸಿದರು.

ಹಿಂದಿನ ಲೇಖನಪೌರ ಕಾರ್ಮಿಕರ ನಿಧನಕ್ಕೆ ಪರಿಹಾರ ನೀಡದ ಮೈಸೂರು ಮಹಾನಗರ ಪಾಲಿಕೆ: ಬೇಸರ ವ್ಯಕ್ತಪಡಿಸಿದ ಪೌರ ಕಾರ್ಮಿಕರ ಒಕ್ಕೂಟ
ಮುಂದಿನ ಲೇಖನದಕ್ಷಿಣ ಪದವೀಧರರ ಚುನಾವಣೆ ಮತ ಎಣಿಕೆ ನಾಳೆ: ಎಣಿಕೆ ಕೇಂದ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್