ಮನೆ ರಾಜಕೀಯ ದಾವೋಸ್ ಪ್ರವಾಸ ಮುಗಿಸಿ ಬೆಂಗಳೂರಿಗೆ ಆಗಮಿಸಿದ ಸಿಎಂ ಬೊಮ್ಮಾಯಿ

ದಾವೋಸ್ ಪ್ರವಾಸ ಮುಗಿಸಿ ಬೆಂಗಳೂರಿಗೆ ಆಗಮಿಸಿದ ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರು ದಿನಗಳ ದಾವೋಸ್ ಪ್ರವಾಸ ಮುಗಿಸಿ ಶುಕ್ರವಾರ ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಸವರಾಜ ಬೊಮ್ಮಾಯಿ ಅವರನ್ನು ಇಂಧನ ಸಚಿವ ವಿ. ಸುನೀಲ್ ಕುಮಾರ್ ಹಾಗೂ ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ ಅವರು ಸ್ವಾಗತ ಮಾಡಿದರು.

ಮೇ 22ರಂದು ಸಿಎಂ ಬೊಮ್ಮಾಯಿ ಸ್ವಿಟ್ಜರ್‌ಲೆಂಡ್‌ಗೆ ಪ್ರಯಾಣ ಬೆಳೆಸಿದ್ದರು. ಕಳೆದ ಐದು ದಿನಗಳ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಹೂಡಿಕೆದಾರರನ್ನು ಸೆಳೆದಿದ್ದರು.

ರಾಜ್ಯಸಭೆಗೆ ಚುನಾವಣೆ ನಾಮಪತ್ರ ಸಲ್ಲಿಸಿದ TRS ಅಭ್ಯರ್ಥಿಗಳು, ದಾವೋಸ್ ಆರ್ಥಿಕ ಶೃಂಗಸಭೆಯ ಫಲಶೃತಿ ಹಾಗೂ ರಾಜ್ಯಕ್ಕೆ ನಿಶ್ಚಯವಾದ ಬಂಡವಾಳದ ಹರಿವು ಕುರಿತು ಸಿಎಂ ಬೊಮ್ಮಾಯಿ ಮಧ್ಯಾಹ್ನ 12.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ.

ಹಿಂದಿನ ಲೇಖನಸಫ್ಧರ್ ಜಂಗ್ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ
ಮುಂದಿನ ಲೇಖನನೆಹರು ಪುಣ್ಯತಿಥಿ: ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರಿಂದ ಪುಷ್ಪನಮನ