ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಚಿತ್ರದುರ್ಗ: ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ 89 ವರ್ಷಗಳ ಬಳಿಕ ಭರ್ತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಬಾಗೀನ ಅರ್ಪಣೆ ಮಾಡಿದರು.
ವಿವಿಧ ಪುಷ್ಪಗಳಿಂದ ಅಲಂಕಾರಗೊಂಡಿದ್ದ ವಿ.ವಿ.ಸಾಗರ ಜಲಾಶಯದ ಅಣೆಕಟ್ಟೆ ಮೇಲಿಂದ ಬಾಗೀನ ಅರ್ಪಿಸಿದರು.
ಪುಷ್ಪಾರ್ಚನೆ ಮಾಡಿ, ಹಾಲು ತುಪ್ಪ ಸುರಿದು ಗಂಗೆಗೆ ನಮನ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ಮೈಸೂರು ಅರಸರ ಕಾಲದಲ್ಲಿ ನಿರ್ಮಾಣವಾದ ಜಲಾಶಯ ಭವ್ಯವಾಗಿದ್ದು, ಮಧ್ಯ ಕರ್ನಾಟಕದ ಜನರಿಗೆ ಉಪಯುಕ್ತವಾಗಿದೆ. 89 ವರ್ಷಗಳ ಬಳಿಕ ಭರ್ತಿಯಾಗಿದೆ. ಸ್ವಾತಂತ್ರ್ಯಾನಂತರ ಇದೇ ಮೊದಲ ಬಾರಗೆ ಬಾಗೀನ ಅರ್ಪಿಸುವ ಸೌಭಾಗ್ಯ ನನಗೆ ಸಿಕ್ಕಿದ್ದು ಐತಿಹಾಸಿಕ ಕ್ಷಣ ಎಂದು ಸಂತಸ ವ್ಯಕ್ತಪಡಿಸಿದರು.
ಮಧ್ಯ ಕರ್ನಾಟಕದ ಈ ಜಲಾಶಯ ಭರ್ತಿ ಆಗಿರುವುದರಿಂದ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯ ಜನರಿಗೆ ಅನುಕೂಲವಾಗಿದೆ. ಕುಡಿಯುವ ನೀರು ಹಾಗೂ ನೀರಾವರಿ ಸೌಲಭ್ಯ ಒದಗಿಸಲು ಸಾಧ್ಯವಾಗಿದೆ. ಪಶ್ಚಿಮ ಘಟ್ಟಗಳಿಂದ ಬರುವ ಜಲವನ್ನು ಸಂಗ್ರಹಿಸುವ ಉದ್ದೇಶದಿಂದ ಮಹಾರಾಜರು ಈ ಜಲಾಶಯ ನಿರ್ಮಿಸಿದ್ದಾರೆ. ಆರ್ಥಿಕ ಸಂಕಷ್ಟದ ನಡುವೆಯೂ ಜಲಾಶಯ ನಿರ್ಮಾಣಕ್ಕಾಗಿ ಮನೆತನದ ಒಡವೆ ಮಾರಾಟ ಮಾಡಿ ಹಣ ಒದಗಿಸಿದ ಮಹಾರಾಜರ ಕಾಳಜಿಗೆ ಜನರ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.
ಈ ಜಲಾಶಯಕ್ಕೆ ನಿರಂತರವಾಗಿ ನೀರು ಹರಿದು ಬರುವ ವ್ಯವಸ್ಥೆ ಮಾಡುತ್ತೇವೆ. ಜಲಾಶಯದ ಕೆಳಬಾಗದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಬರದ ನಾಡು ಎಂಬ ಹಣೆಪಟ್ಟಿಯನ್ನು ಅಳಿಸಲಾಗುವುದು. ಸಂಪದ್ಭರಿತ ಕರ್ನಾಟಕವಾಗಿ ರೂಪಿಸಲು ಸಂಕಲ್ಪ ಮಾಡಿದ್ದೇವೆ ಎಂದರು.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಶಾಸಕರಾದ ಬಿ.ಎಸ್.ಯಡಿಯೂರಪ್ಪ, ಪೂರ್ಣಿಮಾ ಶ್ರೀನಿವಾಸ್, ಜಿ.ಎಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಟಿ.ರಘುಮೂರ್ತಿ, ಕೆ.ಎಸ್.ನವೀನ್, ವೈ.ಎ.ನಾರಾಯಣಸ್ವಾಮಿ ಇದ್ದರು. ಶಾಸಕ ಗೂಳಿಹಟ್ಟಿ ಶೇಖರ್ ಗೈರು ಹಾಜರಾಗಿದ್ದರು.