ಮನೆ ಸುದ್ದಿ ಜಾಲ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ ಬೊಮ್ಮಾಯಿ

ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿರುವ ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಬೆಳಿಗ್ಗೆ ನವದೆಹಲಿಗೆ ತೆರಳಲಿದ್ದು, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ವಿವಿಧ ದೇಶಗಳ ರಾಯಭಾರಿಗಳ ಜತೆ ಅವರು ಸಭೆ ನಡೆಸಲಿದ್ದಾರೆ.

ನವೆಂಬರ್‌ನಲ್ಲಿ ಜಾಗತಿಕ ಹೂಡಿಕೆದಾರರ ಸಭೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿವಿಧ ದೇಶಗಳ ಹೂಡಿಕೆದಾರರನ್ನು ಸೆಳೆಯುವ ಉದ್ದೇಶದಿಂದ ಈ ಸಭೆಯನ್ನು ನಡೆಸಲಿದ್ದಾರೆ.ಅಲ್ಲದೇ ಇದೇ ಸಂದರ್ಭದಲ್ಲಿ ಅವರು ವಿವಿಧ ಕೇಂದ್ರ ಸಚಿವರ ಭೇಟಿಗಾಗಿ ಸಮಯವನ್ನು ಕೇಳಿದ್ದು, ಸಮಯ ಸಿಕ್ಕರೆ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.

ಪಕ್ಷದ ವರಿಷ್ಠರನ್ನೂ ಭೇಟಿ ಮಾಡಲು ಸಿಎಂ ಬೊಮ್ಮಾಯಿ ಉದ್ದೇಶಿಸಿದ್ದು, ಅವಕಾಶ ಸಿಕ್ಕಿದರೆ, ಸಂಪುಟ ಪುನಾರಚನೆ ಬಗ್ಗೆಯೂ ಮಾತಕತೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಬುಧವಾರ ಅವರು ದೆಹಲಿಯಿಂದ ನಗರಕ್ಕೆ ವಾಪಸ್‌ ಬರಲಿದ್ದಾರೆ.

ಹಿಂದಿನ ಲೇಖನಮುತಾಲಿಕ್ ಅಂತವರನ್ನು ಒದ್ದು ಒಳಗೆ ಹಾಕಿ: ಹೆಚ್ ಡಿ ಕುಮಾರಸ್ವಾಮಿ
ಮುಂದಿನ ಲೇಖನಪಿಡಿಓ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಿಇಓಗಳು ಮುಂದಾಗಿ: ಸಿಎಂ