ಮನೆ ರಾಜ್ಯ 100 ಕೃಷಿ ಸಂಜೀವಿನಿಯ ವಾಹನಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

100 ಕೃಷಿ ಸಂಜೀವಿನಿಯ ವಾಹನಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

0

ಬೆಂಗಳೂರು (Bengaluru)- ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ಕೃಷಿ ಸಂಜೀವಿನಿಯ 100 ವಾಹನಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basvaraj Bommai) ಇಂದು ಚಾಲನೆ ನೀಡಿದರು.

ಜಿಕೆವಿಕೆಯಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ 100 ಕೃಷಿ ಸಂಜೀವಿನಿಯ ವಾಹನಗಳಿಗೆ  ಚಾಲನೆ ನೀಡಿದರು.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪ್ರಾಯೋಗಿಕವಾಗಿ 40 ಕೃಷಿ ಸಂಜೀವಿನಿ ವಾಹನಗಳಿಗೆ ಚಾಲನೆ ನೀಡಲಾಗಿತ್ತು. ಇದೀಗ ರೈತರಿಗೆ ಮತ್ತಷ್ಟು ಸಹಕಾರಿಯಾಗಲು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ರೈತ ಸಂಪರ್ಕ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು 100 ವಾಹನಗಳಿಗೆ ಚಾಲನೆ ನೀಡಲಾಯಿತು.

ರೈತರು ಕೃಷಿ ಸಂಜೀವಿನಿ ಸಹಾಯವಾಣಿ ಸಂಖ್ಯೆ 155313 ಕರೆ ಮಾಡಿದರೆ, ನೇರವಾಗಿ ರೈತರ ಜಮೀನುಗಳಿಗೆ ಬಂದು ಪರೀಕ್ಷೆ ಮಾಡುತ್ತದೆ. ಜಮೀನುಗಳಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಸವೆತ, ಅತಿಯಾದ ಬೆಳೆ ಬೆಳವಣಿಗೆ, ಕೀಟ ಮತ್ತು ರೋಗದಂತಹ ನೈಸರ್ಗಿಕ ವಿಪತ್ತುಗಳಿಗೆ ಪರಿಹಾರ ಒದಗಿಸುತ್ತದೆ.

ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕೆ ಸಚಿವ ಮುನಿರತ್ನ ಮತ್ತಿರರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದಿನ ಲೇಖನಬದರಿನಾಥ್‌ ದೇವಾಲಯಕ್ಕೆ ಭಕ್ತರಿಗೆ ಪ್ರವೇಶ
ಮುಂದಿನ ಲೇಖನಆರಗ ಜ್ಞಾನೇಂದ್ರ ಮೆಂಟಲ್‌: ಕಿಮ್ಮನೆ ರತ್ನಾಕರ್