ಮನೆ ರಾಜಕೀಯ ಗುರುಲಿಂಗಸ್ವಾಮಿ ಪಾರ್ಥಿವ ಶರೀರಕ್ಕೆ ಸಿಎಂ ಬೊಮ್ಮಾಯಿ ಅಂತಿಮ ನಮನ

ಗುರುಲಿಂಗಸ್ವಾಮಿ ಪಾರ್ಥಿವ ಶರೀರಕ್ಕೆ ಸಿಎಂ ಬೊಮ್ಮಾಯಿ ಅಂತಿಮ ನಮನ

0

ಬೆಂಗಳೂರು(Bengaluru) : ಇಂದು ಬೆಳಿಗ್ಗೆ ನಿಧನರಾದ ಮುಖ್ಯಮಂತ್ರಿ ಅವರ ಮಾಧ್ಯಮ ಸಂಯೋಜಕರಾದ ಗುರುಲಿಂಗಸ್ವಾಮಿ ಹೊಳಿಮಠ ಅವರ ಪಾರ್ಥಿವ ಶರೀರಕ್ಕೆ ಸಿಎಂ ಬೊಮ್ಮಾಯಿ ಅವರು ಅಂತಿಮ ನಮನ ಸಲ್ಲಿಸಿದರು.

ನಂತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬೆಳಿಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಅಸ್ವಸ್ಥಗೊಂಡ ಗುರುಲಿಂಗ ಸ್ವಾಮಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಗುರುಲಿಂಗ ಸ್ವಾಮಿ ಹೊಳಿಮಠ (45) ವಿವಿಧ ಪತ್ರಿಕೆ, ಟಿವಿ ಚಾನೆಲ್‌ಗಳಲ್ಲಿ ಕಾರ್ಯನಿರ್ವಹಿಸಿದ್ದರು. ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಾಗರಬಾವಿ ನಿವಾಸದಲ್ಲಿ ಮಧ್ಯಾಹ್ನ 2 ಗಂಟೆಯ ವರೆಗೆ ಅವಕಾಶ ಕಲ್ಪಿಸಲಾಗಿ. ನಂತರ ಅವರ ಅಂತ್ಯ ಸಂಸ್ಕಾರವನ್ನು ಅವರ ಹುಟ್ಟೂರು ರಾಮದುರ್ಗದಲ್ಲಿ ನೆರವೇರಿಸಲಾಯಿತು.

ಹಿಂದಿನ ಲೇಖನಪತ್ನಿ ವಿದ್ಯಾವಂತೆಯಾಗಿದ್ರೆ ಪತಿ ಜೀವನಾಂಶ ಕೊಡುವ ಅವಶ್ಯಕತೆ ಇಲ್ಲ: ಮುಂಬೈ ಕೋರ್ಟ್
ಮುಂದಿನ ಲೇಖನನಾವು ಪೂಜಿಸುವ ಈ ತುಳಸಿ ನಿಜಕ್ಕೂ ಯಾರು ಗೊತ್ತಾ.? ಇಲ್ಲಿದೆ ಮಾಹಿತಿ