ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸತ್ ಭವನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ವೇಳೆ ರಾಜ್ಯಕ್ಕೆ ಬರಬೇಕಾದ ಅನುದಾನಗಳ ಕುರಿತು ಚರ್ಚೆ ನಡೆಸಿದರು ಎನ್ನಲಾಗಿದೆ.
ಇದಕ್ಕೂ ಮೊದಲು ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು.
ಸಂಸತ್ ಭವನ ಭೇಟಿಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕರ್ನಾಟಕದಲ್ಲಿ ಎಲ್ಲರೂ ಚೆನ್ನಾಗಿದ್ದಾರೆ… ನನ್ನ ಮತ್ತು ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ನಾವು ಒಟ್ಟಿಗೆ ಇದ್ದೇವೆ” ಎಂದರು.