ಮನೆ ಸ್ಥಳೀಯ ಸಿಎಂ ಸಿದ್ದರಾಮಯ್ಯ ಜನ್ಮದಿನ: ಕಾಂಗ್ರೆಸ್ ಭವನದ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ

ಸಿಎಂ ಸಿದ್ದರಾಮಯ್ಯ ಜನ್ಮದಿನ: ಕಾಂಗ್ರೆಸ್ ಭವನದ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ

0

ಮೈಸೂರು: ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ಘಟಕದ  ಆಶ್ರಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 76 ನೇ ಜನ್ಮದಿನದ ಅಂಗವಾಗಿ  ಮೈಸೂರಿನ ಚೆಲುವಂಬ ಸರ್ಕಾರಿ ಆಸ್ಪತ್ರೆಯಲ್ಲಿ  ಬಾಣಂತಿಯರಿಗೆ ಹೊದಿಕೆ, ಹಣ್ಣು ಹಾಗೂ ಸಿಹಿ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ  ಡಾ ಬಿಜೆ. ವಿಜಯ್ ಕುಮಾರ್, ನಗರಾಧ್ಯಕ್ಷರಾದ ಆರ್ ಮೂರ್ತಿ , ಜಿಲ್ಲಾ ಹಿಂದುಳಿದ ವರ್ಗದ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ  ಮಾರುತಿ ಹಾಗೂ ಇತರ ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.

ಅಂತೆಯೇ ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 76ನೇ ಜನ್ಮದಿನದ  ಅಂಗವಾಗಿ ಕಾಂಗ್ರೆಸ್ ಭವನದ ಮುಂಭಾಗದ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು.