ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದು, ಸಮಯಾವಕಾಶ ಸಿಕ್ಕಲ್ಲಿ ರಾಜ್ಯ ರಾಜಕಾರಣದ ಕುರಿತು ಹೈಕಮಾಂಡ್ ನಾಯಕರ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿಯಾಗುವ ಸಾಧ್ಯತೆ ಇದೆ. ಸಮಯ ಕೇಳಿದ್ದೇನೆ, ಅವರಿನ್ನೂ ಸಮಯ ಕೊಟ್ಟಿಲ್ಲ. ಅವರು ಸಮಯ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ. ನಡ್ಡಾ ನಂತರ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಭೇಟಿ ಮಾಡಬೇಕೆಂದುಕೊಂಡಿದ್ದೇನೆ ಎಂದರು.
ಸುಪ್ರೀಂ ಕೋರ್ಟ್’ನಲ್ಲಿ ನವೆಂಬರ್ 30 ರಂದು ಗಡಿ ವಿವಾದ ಕುರಿತ ಪ್ರಕರಣದ ಅರ್ಜಿ ವಿಚಾರಣೆಗೆ ಬರಲಿದೆ. ಹಾಗಾಗಿ ಪ್ರಕರಣ ಕುರಿತು ನಮ್ಮ ಹಿರಿಯ ವಕೀಲ ಮುಕುಲ್ ರಹೊಟೊಗಿ ಅವರನ್ನು ಭೇಟಿಯಾಗುತ್ತೇನೆ. ರಾಜ್ಯದ ಮಾಹಿತಿ ನೀಡಿ ಚರ್ಚಿಸಲಾಗುತ್ತದೆ ಎಂದರು.
ಸಂವಿಧಾನ ತಿದ್ದಿದ್ದು ಕಾಂಗ್ರೆಸ್:
ಬಿಜೆಪಿಯವರು ಸಂವಿಧಾನವನ್ನೇ ತಿರುಚಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ ಆರೋಪಕ್ಕೆ ಕಿಡಿಕಾರಿದ ಸಿಎಂ, ಸಂವಿಧಾನ ತಿದ್ದಿದ್ದು ಕಾಂಗ್ರೆಸ್. ತುರ್ತು ಪರಿಸ್ಥಿತಿಯಲ್ಲಿ ಸಂವಿಧಾನವನ್ನು ಗಾಳಿ ತೂರಿದ್ದು ಕಾಂಗ್ರೆಸ್, ವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿ ಎಲ್ಲರನ್ನು ಜೈಲಿಗೆ ಹಾಕಿದ್ದು ಕಾಂಗ್ರೆಸ್. ಅವರಿಂದ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದರು.