ಮನೆ ಅಂತಾರಾಷ್ಟ್ರೀಯ ದಾವೋಸ್ ವಿಶ್ವ ಆರ್ಥಿಕ ಶೃಂಗಸಭೆ: ಪ್ರವಾಸವನ್ನು ವಿಸ್ತರಿಸಿದ ಸಿಎಂ, ಶುಕ್ರವಾರ ಬೆಂಗಳೂರಿಗೆ ವಾಪಸ್

ದಾವೋಸ್ ವಿಶ್ವ ಆರ್ಥಿಕ ಶೃಂಗಸಭೆ: ಪ್ರವಾಸವನ್ನು ವಿಸ್ತರಿಸಿದ ಸಿಎಂ, ಶುಕ್ರವಾರ ಬೆಂಗಳೂರಿಗೆ ವಾಪಸ್

0

ಬೆಂಗಳೂರು(Bengaluru): ದಾವೋಸ್​ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತಮ್ಮ ಪ್ರವಾಸವನ್ನು ಒಂದು ದಿನ ವಿಸ್ತರಣೆ ಮಾಡಿದ್ದು, ಶುಕ್ರವಾರ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ಒಂಬತ್ತು ಗಂಟೆಗೆ ದಾವೋಸ್​ನಿಂದ ಮುಖ್ಯಮಂತ್ರಿಗಳು ಬೆಂಗಳೂರಿಗೆ ವಾಪಸ್​ ಆಗಬೇಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಪ್ರವಾಸ ಮುಂದೂಡಿಕೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.

ರಾಜ್ಯದಲ್ಲಿ ಹೂಡಿಕೆ ಮಾಡಲು ಇಚ್ಚಿಸಿರುವ ಉದ್ಯಮಿಗಳ ಜತೆ ಮತ್ತೊಂದು ಸುತ್ತಿನ ಮಾತುಕತೆ ನಿಗದಿಯಾದ ಹಿನ್ನೆಲೆಯಲ್ಲಿ ಪ್ರವಾಸ ಮುಂದೂಡಿ ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆಂದು ತಿಳಿದುಬಂದಿದೆ. ಮುಖ್ಯಮಂತ್ರಿಗಳ ಜೊತೆಗೆ ಸಚಿವರಾದ ಮುರುಗೇಶ್ ನಿರಾಣಿ, ಡಾ.ಅಶ್ವತ್ಥ್​ ನಾರಾಯಣ್ ಕೂಡ ಉಪಸ್ಥಿತರಿರಲಿದ್ದಾರೆ.

ಹಿಂದಿನ ಲೇಖನಮೈಸೂರು: ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿತ
ಮುಂದಿನ ಲೇಖನಪಿಎಸ್‌ಐಗೆ ಚಾರ್ಜ್‌ಶೀಟ್ ಸಲ್ಲಿಸಲು ಅರ್ಹತೆ ಇದೆ: ಹೈಕೋರ್ಟ್