ಮೈಸೂರು : ಜು. 07 ಪೂರ್ವ ಮುಂಗಾರು ಮತ್ತು ಮುಂಗಾರು ಅವಧಿಯಲ್ಲಿ ಅತಿವೃಷ್ಟಿಯಿಂದ ಸಂಭವಿಸಿರುವ ಹಾನಿ ಹಾಗೂ ಸರ್ಕಾರದ ಮಾರ್ಗಸೂಚಿ ಅನುಸಾರ ಪರಿಹಾರ ಪಾವತಿ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ, ಪರಿಹಾರ ಪಾವತಿಗೆ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣವೇ ಪರಿಹಾರ ಪಾವತಿಸುವಂತೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ತಿಳಿಸಿದರು.
ನಂಜನಗೂಡಿನಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಕೆಲಸಗಳಿಗೆ ಅಡಚಣೆಯಾಗದಂತೆ ಜಿಲ್ಲೆಯ ಎಲ್ಲಾ ಉಪತಹಸೀಲ್ದಾರರು, ರಾಜಸ್ವ ನಿರೀಕ್ಷಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು, ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳದಿಂದ ಗೂಗಲ್ ಮೀಟ್ ಮೂಲಕ ಜಿಲ್ಲಾ ಮಟ್ಟದ ಕಂದಾಯಧಿಕಾರಿಗಳ ಸಭೆಯಲ್ಲಿ ನಡೆಯಿತು.
ಕೆರೆಗಳ ಒತ್ತುವರಿ ಗುರುತಿಸಲು ಆಯಾ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಮೊದಲಿಗೆ 10 ಎಕರೆಗೆ ಮೀರಿದ ಕೆರೆ ಪ್ರದೇಶದ ಒತ್ತುವರಿ ಗುರುತಿಸಿ ತೆರವು ಮಾಡಲು ತಹಸೀಲ್ದಾರರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸರ್ಕಾರಿ ಜಮೀನುಗಳಲ್ಲಿರುವ ಒತ್ತುವರಿಗಳನ್ನು ಗುರುತಿಸಿ ತೆರವು ಮಾಡಲು, ಜನಸಂಖ್ಯೆಗೆ ಅನುಗುಣವಾಗಿ ಸ್ಮಶಾನ ಜಮೀನು ಲಭ್ಯಪಡಿಸಲು ಸೂಚಿನೆ ನೀಡಲಾಯಿತು. ಭೂಮಿ ತಂತ್ರಾಂಶದಲ್ಲಿ ಸ್ವೀಕೃತವಾಗುವ ಅರ್ಜಿಗಳನ್ನು ಆಧ್ಯತೆ ಮೀರಿ ಇತ್ಯರ್ಥಪಡಿಸಲು ಸೂಚನೆ ನೀಡಲಾಯಿತು. ಅವಧಿ ಮೀರಿ ಬಾಕಿ ಉಳಿಸಿಕೊಂಡಿರುವ ಅರ್ಜಿಗಳಿಗೆ ಸಂಬಂಧಪಟ್ಟಂತೆ ನೇರವಾಗಿ ಕಂದಾಯ ನಿರೀಕ್ಷಕರಿಗೆ ವಿಚಾರಿಸಿ ಎಚ್ಚರಿಕೆ ನೀಡಿ ತಕ್ಷಣವೇ ಇತ್ಯರ್ಥಕ್ಕೆ ಕ್ರಮವಹಿಸುವಂತೆ ತಿಳಿಸಿದರು.
ಕಂದಾಯ ವಿಷಯಗಳಲ್ಲಿ ಆಡಳಿತಾತ್ಮಕ ದೃಷ್ಟಿಯಲ್ಲಿ ಕೆಲವೊಮ್ಮೆ ಸಾರ್ವಜನಿಕರ ಸಮಸ್ಯೆ ಇತ್ಯರ್ಥಪಡಿಸಲು ಸಮಯಾವಕಾಶ ಅವಶ್ಯಕವಾಗಿದ್ದು, ಆದರೆ ಸಾಮಾಜಿಕ ಭದ್ರತೆ ಯೋಜನೆಯಡಿ ಮಂಜೂರು ಮಾಡುವ ಪಿಂಚಣಿ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ ಕ್ರಮಕೈಗೊಳ್ಳಲು ಸೂಚನೆ ನೀಡಲಾಯಿತು. ಆಧಾರ್ ಲಿಂಕ್ ಆಗದ ಕಾರಣ ಪಿಂಚಣಿ ತಡೆಹಿಡಿದಿರುವ ಪ್ರಕರಣಗಳಲ್ಲಿ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳು ಅಂತಹ ವಂಚಿತ ಫಲಾನುಭವಿಗಳನ್ನು ಖುದ್ದಾಗಿ ಸಂಪರ್ಕಿಸಿ ದಾಖಲೆಗಳನ್ನು ಪಡೆದು ಪಿಂಚಣಿಗಳನ್ನು ಮರುಸ್ಥಾಪಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳು, ಭೂ ದಾಖಲೆಗಳ ಉಪ ನಿರ್ದೇಶಕರು, ಉಪವಿಭಾಗಾಧಿಕಾರಿ-ಮೈಸೂರು ಮತ್ತು ಹುಣಸೂರು, ಜಿಲ್ಲೆಯ ಎಲ್ಲಾ ತಾಲ್ಲೂಕು ತಹಸೀಲ್ದಾರರು, ಸಹಾಯಕ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.