ಮನೆ ರಾಜಕೀಯ ಸುಮಲತಾ ಅಂಬರೀಶ್ ಮಂಡ್ಯದಿಂದಲೇ ಸ್ಪರ್ಧೆ: ಆಪ್ತ ಹನಕೆರೆ ಶಶಿಕುಮಾರ್​

ಸುಮಲತಾ ಅಂಬರೀಶ್ ಮಂಡ್ಯದಿಂದಲೇ ಸ್ಪರ್ಧೆ: ಆಪ್ತ ಹನಕೆರೆ ಶಶಿಕುಮಾರ್​

0

ಮಂಡ್ಯ: ಸುಮಲತಾ ಅಂಬರೀಶ್​ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲೇ ಮತ್ತೆ ಸ್ಪರ್ಧಿಸುತ್ತಾರೆ ಎಂದು ಸಂಸದೆ ಸುಮಲತಾ ಅಂಬರೀಶ್​ ಆಪ್ತ ಹನಕೆರೆ ಶಶಿಕುಮಾರ್​ ತಿಳಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳುವ ವಿಶ್ವಾಸವಿದೆ. ಕಳೆದ ನಾಲ್ಕು ವರ್ಷದಿಂದ ಸುಮಲತಾ ಅಂಬರೀಶ ಅವರು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲೂ ಸುಮಲತಾ ಅಭ್ಯರ್ಥಿ ಆಗಿರುತ್ತಾರೆ. ಎಲ್ಲಾ ಹೋರಾಟಗಳಲ್ಲೂ ಸುಮಲತಾ ಮುಂಚೂಣಿಯಲ್ಲಿದ್ದಾರೆ. ಅತಿ ಹೆಚ್ಚು ದಿಶಾ ಸಭೆ ನಡೆಸಿದ ಹೆಗ್ಗಳಿಕೆ ಸುಮಲತಾ ಅವರದ್ದು. ಚುನಾವಣೆಯಲ್ಲಿ ಬಿಜೆಪಿಗೆ ಸುಮಲತಾ ಅಂಬರೀಶ ಅವರು ಬಾಹ್ಯ ಬೆಂಬಲ ಕೊಟ್ಟಿದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಆಗಿದೆ ಎಂದರು.

ಜೆಡಿಎಸ್‌‌ಗೆ ಮಂಡ್ಯ ಕ್ಷೇತ್ರ ಬಿಟ್ಟುಕೊಡುತ್ತಾರೆ ಎಂಬ ಚರ್ಚೆ ಆಗುತ್ತಿದೆ. ಸುಮಲತಾ ಈಗಲೂ ಪಕ್ಷೇತರ ಸಂಸದೆ, ಬಿಜೆಪಿ ಸದಸ್ಯತ್ವ ಪಡೆದಿಲ್ಲ. ಪಕ್ಷ ಯಾವುದಾದರೂ ಸುಮಲತಾ ಅಂಬರೀಶ ಅವರು ಮಂಡ್ಯ ಅಭ್ಯರ್ಥಿ ಆಗಿರಬೇಕು. ಯಾವುದೇ ಪಕ್ಷದಿಂದ ಸ್ಪರ್ಧೆ ಮಾಡಿದರೂ ನಮ್ಮ ಬೆಂಬಲ ಇರುತ್ತದೆ. ಜೆಡಿಎಸ್​ಗೆ ಮಂಡ್ಯ ಕ್ಷೇತ್ರ ಬಿಟ್ಟು ಕೊಟ್ಟರೂ ಸುಮಲತಾ ಅಂಬರೀಶ ಸ್ಪರ್ಧೆ ಖಚಿತವಾಗಿದೆ. ಬಿಜೆಪಿ ಮಂಡ್ಯ ಉಳಿಸಿಕೊಳ್ಳುವ ವಿಶ್ವಾಸವಿದೆ. ಸುಮಲತಾ ಅವರ ಅವಶ್ಯಕತೆ ಇದ್ದರೆ ಮಂಡ್ಯ ಕ್ಷೇತ್ರ ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿದರು.

ಅಂಬರೀಶ್‌ರವರು ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು. ರಾಜಕೀಯದಲ್ಲಿ ಬದಲಾವಣೆ ಗಾಳಿ ಯಾವಾಗ ಬೇಕಾದರೂ ಬೀಸಬಹುದು. ಏನೇ ಆದರೂ ಸುಮಲತಾರವರು ಕಣದಲ್ಲಿರುತ್ತಾರೆ. ಚರ್ಚೆ ‌ನಡೆಸಿ, ಸುಮಲತಾ ಅಂಬರೀಶ ಅವರ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ಸಂಸದೆ ಸುಮಲತಾ ಅಂಬರೀಶ ಅವರು ಬೆಂಗಳೂರಿಗೆ ಬಂದ ತಕ್ಷಣ ಭೇಟಿ ಮಾಡುತ್ತೇವೆ ಎಂದು ಹೇಳಿದರು.

ಹಿಂದಿನ ಲೇಖನಪೋಕ್ಸೊ ನ್ಯಾಯಾಲಯಗಳ ಸಾಕ್ಷಿ ಕಟಕಟೆ ನಾಯಿಗೂಡಿಗಿಂತಲೂ ಕಡೆ; ಮಕ್ಕಳಿಗೆ ಅಹಿತಕರ: ಕೇರಳ ಹೈಕೋರ್ಟ್ ಬೇಸರ
ಮುಂದಿನ ಲೇಖನನಾನು ನ್ಯಾಷನಲ್ ಲೀಡರ್ ಅಲ್ಲ: ಯತೀಂದ್ರ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ತಿರುಗೇಟು