ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಯ ಅಹವಾಲುಗಳಿಗೆ ಸ್ಪಂದಿಸಿಲ್ಲ ಎಂಬ ಕಾರಣಕ್ಕೆ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಜಿ. ಸತ್ಯವತಿ ವರ್ಗಾವಣೆ ಮಾಡಲಾಗಿದೆ.
ಒಂದೂವರೆ ವರ್ಷದಿಂದ ನಿಗಮದ ಎಂಡಿಯಾಗಿದ್ದ ಸತ್ಯವತಿ ಅವರಿಗೆ ಯಾವುದೇ ಹುದ್ದೆ ತೋರಿಸದೇ ವರ್ಗ ಮಾಡಲಾಗಿದೆ. ಅವರ ಜಾಗಕ್ಕೆ ಮತ್ತೊಬ್ಬ ಐಎಎಸ್ ಅಧಿಕಾರಿ ಸದ್ಯ ಬಿಬಿಎಂಪಿ ವಿಶೇಷ ಆಯುಕ್ತ (ಚುನಾವಣೆ) ಆರ್.ರಾಮಚಂದ್ರನ್ ಅವರನ್ನು ನೇಮಿಸಲಾಗಿದೆ.
ಕೆಎಸ್ ಆರ್ಟಿ ಸಿ ಸ್ಟಾಫ್ ಆ್ಯಂಡ್ ವರ್ಕಸ್ ಫೆಡರೇಷನ್ ಜೊತೆಗೆ ಸತ್ಯವತಿ ಅವರು ಉತ್ತಮ ಸಂಬಂಧ ಹೊಂದಿರಲಿಲ್ಲ. ಈ ಕಾರಣಕ್ಕೆ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಫೆಡರೇಷನ್ ನ ಪ್ರಮುಖರೊಬ್ಬರು ಹೇಳಿದರು.
2023ರ ಡಿ. 24ರಂದು ಸತ್ಯವತಿ ಅವರಿಗೆ ಪತ್ರವೊಂದನ್ನು ಬರೆದಿದ್ದ ಫೆಡರೇಷನ್, ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತ್ತು. ಅದೇ ಕಾರಣಕ್ಕೆ 100 ಎಲೆಕ್ಟ್ರಿಕ್ ಹವಾ ನಿಯಂತ್ರಿತವಲ್ಲದ ಬಸ್ ಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನೂ ಬಹಿಷ್ಕರಿಸಿತ್ತು.
ಫೆಡರೇಶನ್ ಅಧ್ಯಕ್ಷ ಎಚ್.ವಿ. ಅನಂತ್ ಸುಬ್ಬರಾವ್ ಮಾತನಾಡಿ, ಸತ್ಯವತಿ ಅವರು ಒಂದು ಬಾರಿಯೂ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿಲ್ಲ. ಬಿಎಂಟಿಸಿ ನೌಕರರ ಜೊತೆ ಸಂವಾದವನ್ನೂ ನಡೆಸಿಲ್ಲ. ಅವರನ್ನು ಬದಲಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿತ್ತು ಎಂದರು.
ಸಾರಿಗೆ ನೌಕರರ ಕುಂದುಕೊರತೆಗಳಿಗೆ ಸತ್ಯವತಿ ಸ್ಪಂದಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ದೂರು ಸಲ್ಲಿಸಲಾಗಿತ್ತು.
ಕೆ ಎಸ್ ಆರ್ ಟಿ ಸಿ. ಚಾಲಕರ ಹುದ್ದೆಗೆ ಅರ್ಜಿ ಆಹ್ವಾನ
ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ, "ಉದ್ಯೋಗಿನಿ" ಯೋಜನೆ!
ಸ್ಟೇಜ್ ಮೇಲೆ ಯುವ'ನಾ ಚಂಗಲಾಟ….!!
ವಸ್ತು ಪ್ರದರ್ಶನ ಪ್ರಾಧಿಕಾರದಲ್ಲಿ ರಕ್ತ ಪಿಪಾಸುಗಳು…
ಮಂತ್ರಿಯಾಗಿ ಪವನ್ ಕಲ್ಯಾಣ ಪ್ರಮಾಣವಚನ
ಮಾಧ್ಯಮ ರಂಗದ ಭೀಷ್ಮ ರಾಮೋಜಿ ರಾವ್ ನಿಧನ.!
ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪೈ.ಲಿ.ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆರ್ಜಿ ಆಹ್ವಾನ
ಡಿವೋಸ್ ಮೊರೆ ಹೋದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ!
PM ಮೋದಿಯವರು ಸಂವಿಧಾನ್ ಸದನ್ಗೆ ಆಗಮಿಸುತ್ತಿದ್ದಂತೆ ಮೋದಿ ಮೋದಿ ಘೋಷಣೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.