ಮನೆ ಸುದ್ದಿ ಜಾಲ ಆದಿವಾಸಿ ಕಾಲೋನಿಗಳಲ್ಲಿ ಅಕ್ರಮ ಮಧ್ಯ ಮಾರಾಟಕ್ಕೆ ಸಂಪೂರ್ಣ ಕಡಿವಾಣ: ಅಬಕಾರಿ ಡಿಸಿ ಡಾ.ಮಹದೇವಿ ಬಾಯಿ ಎಚ್ಚರಿಕೆ

ಆದಿವಾಸಿ ಕಾಲೋನಿಗಳಲ್ಲಿ ಅಕ್ರಮ ಮಧ್ಯ ಮಾರಾಟಕ್ಕೆ ಸಂಪೂರ್ಣ ಕಡಿವಾಣ: ಅಬಕಾರಿ ಡಿಸಿ ಡಾ.ಮಹದೇವಿ ಬಾಯಿ ಎಚ್ಚರಿಕೆ

0


ನಂಜನಗೂಡು:ಏ.೦೩: ತಾಲೂಕಿನ ಆದಿವಾಸಿ ಕಾಲೋನಿ ಮತ್ತು ಗ್ರಾಮೀಣ ಪ್ರದೇಶದ ಕಿರಾಣಿ ಮತ್ತು ಪೆಟ್ಟಿಗೆ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಹೆಗ್ಗಿಲ್ಲದೆ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿದ್ದ ಹಿನ್ನೆಲೆ ಮಾಹಿತಿ ಅರಿತ ಮೈಸೂರು ಗ್ರಾಮಾಂತರ ಉಪ ಆಯುಕ್ತೆ ಡಾ.ಮಹದೇವಿ ಬಾಯಿ ನಂಜನಗೂಡಿನ ಅಬಕಾರಿ ಇಲಾಖೆಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಧ್ಯದ ಅಂಗಡಿಯ ಮಾಲೀಕರು ಮತ್ತು ಅನಧಿಕೃತವಾಗಿ ಮಧ್ಯ ಮಾರಾಟ ಮಾಡುವವರಿಗೆ ಎಚ್ಚರಿಕೆಯ ಸಂದೇಶವನ್ನು ತಿಳಿಸಿದ್ದಾರೆ.


ತಾಲ್ಲೂಕಿನ ಬಾರ್ ಸನ್ನದುದಾರರ ಜೊತೆ ಸಭೆಯನ್ನು ನಡೆಸಿ ಆದಿವಾಸಿಗಳು ವಾಸಿಸುವ ಕಾಲೋನಿಗಳಲ್ಲಿ ಮತ್ತು ಹಳ್ಳಿಗಳಲ್ಲಿರುವ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಹಾಗೂ ನಾಗಣಾಪುರ ಕಾಲೋನಿಯಲ್ಲಿ ಮದ್ಯೆ ಸೇವಿಸಿ ವ್ಯಕ್ತಿ ಸಾವನ್ನಪಿರುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸನ್ನದುದಾರರ ಜೊತೆ ಸಭೆ ನಡೆಸಿ ಅವರಿಗೆ ನಿರ್ದೇಶನ ನೀಡಲಾಗಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಬಾರ್‌ಗಳಿಂದ ಹಳ್ಳಿಗಳಲ್ಲಿರುವ ಕಿರಾಣಿ ಅಂಗಡಿಗಳು ಮತ್ತು ಪೆಟ್ಟಿ ಅಂಗಡಿಗಳಿಗೆ ಮದ್ಯವನ್ನು ಸರಬರಾಜು ಮಾಡುತ್ತಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈಗಾಗಲೇ ಸಾಕ? ಪ್ರಕರಣಗಳನ್ನು ಕೂಡ ದಾಖಲು ಮಾಡಿಕೊಳ್ಳಲಾಗಿದೆ ಒಂದು ವೇಳೆ ಬಾರ್‌ಗಳಿಂದ ಸರಬರಾಜು ಮಾಡುವುದು ಕಂಡು ಬಂದರೆ ಮುಲಾಜಿಲ್ಲದೆ ಬಾರ್ ಮಾಲೀಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.


ನಂಜನಗೂಡು ತಾಲ್ಲೂಕಿನಲ್ಲಿ ವಿಶೇ?ವಾಗಿ ಐದು ತಂಡಗಳನ್ನು ರಚನೆ ಮಾಡಲಾಗಿದೆ. ೫ ತಂಡಗಳಿಗೂ ನಿರ್ದೇಶನ ನೀಡಲಾಗಿದ್ದು, ಅಕ್ರಮ ಮದ್ಯ ಮಾರಾಟ ಕಂಡು ಬಂದರೆ ಅಬಕಾರಿ ಇಲಾಖೆಯ ದೂರವಾಣಿ ೯೪೪೯೫೯೭೧೮೪ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ ತಿಳಿಸಬಹುದು ಎಂದು ಮನವಿಮಾಡಿದರು. ಈ ಸಂದರ್ಭದಲ್ಲಿ ಅಬಕಾರಿ ಉಪ ಅಧೀಕ್ಷಕರಾದ ನಟರಾಜ್, ನಂಜನಗೂಡು ವಲಯ ಅಬಕಾರಿ ನಿರೀಕ್ಷಕ ನಾಗೇಂದ್ರ, ಅಬಕಾರಿ ಉಪ ನಿರೀಕ್ಷಕ ಅಬ್ಜಲ್, ಸಿಬ್ಬಂದಿಗಳಾದ ಚಂದ್ರು, ಅಭಿ, ಮಧುಕೇಶ್, ಶಿಲ್ಪಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮೈಸೂರು ಗ್ರಾಮಾಂತರ ಅಬಕಾರಿ ಉಪ ಆಯುಕ್ತರಾದ ಡಾ.ಮಹದೇವಿ ಬಾಯಿ ಮಾತನಾಡಿ, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಅಕ್ರಮ ಮಧ್ಯ ಮಾರಾಟ ವಿಚಾರವಾಗಿ ಈಗಾಗಲೇ ಮಧ್ಯದ ಅಂಗಡಿ ಮಾಲೀಕರ ಜೊತೆ ಕುಲಂಕು?ವಾಗಿ ಮತ್ತು ಸುದೀರ್ಘವಾಗಿ ಸಭೆ ನಡೆಸಿ ಎಚ್ಚರಿಸಲಾಗಿದೆ. ಆದಿವಾಸಿ ಕಾಲೋನಿಗಳಲ್ಲಿ ಅಕ್ರಮ ಮಧ್ಯದ ಮಾರಾಟ ಕಂಡು ಬಂದಲ್ಲಿ ಅಂಥವರ ವಿರುದ್ಧ ನಿರ್ಧ್ಯಕ್ಷೀಣವಾಗಿ ಕ್ರಮ ಕೈಗೊಳ್ಳುತ್ತೇವೆ ಈಗಾಗಲೇ ಮೂರು ತಂಡಗಳನ್ನು ರಚನೆ ಮಾಡಲಾಗಿದೆ ರಾತ್ರಿ ಹಗಲು ನಿರಂತರವಾಗಿ ಆ ತಂಡಗಳು ಕಾರ್ಯಾಚರಣೆಯಲ್ಲಿ ನಿರತರಾಗಿರುತ್ತಾರೆ.

ಅಕ್ರಮ ಮಧ್ಯ ಮಾರಾಟ ಮತ್ತು ಅನಧಿಕೃತವಾಗಿ ಮಧ್ಯ ಮಾರಾಟ ಮಾಡಿರುವ ಅಂಗಡಿ ಮಾಲೀಕರ ವಿರುದ್ಧವೂ ಕೂಡ ನಾವು ಕ್ರಮಕ್ಕೆ ಮುಂದಾಗುತ್ತೇವೆ ಈಗಾಗಲೇ ನಾಗಣಪುರ ಆದಿವಾಸಿ ಕಾಲೋನಿಗೆ ಭೇಟಿ ನೀಡಿ ಕುಲಂಕುಶವಾಗಿ ಸವಿವರವಾದ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ. ಮಧ್ಯ ಮಾರಾಟ ಮತ್ತು ಟೆಟ್ರಾ ಪ್ಯಾಕ್‌ಗಳು ಸಿಕ್ಕಿದರೂ ಕೂಡ ಅಂಥವರನ್ನು ಜೈಲಿಗೆ ಕಳಿಸಲು ನಾವು ತಯಾರಾಗಿದ್ದೇವೆ ಅಕ್ರಮಗಳ ಬಗ್ಗೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲು ಅಬಕಾರಿ ಇಲಾಖೆ ಸಿದ್ದವಾಗಿದೆ ಎಂದು ಸಂದರ್ಭದಲ್ಲಿ ಡಿಸಿ ಮಾಹಿತಿ ನೀಡಿದರು.