ಮೈಸೂರು: ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಪ್ರತಿಯೊಬ್ಬ ರಾಜಕೀಯ ಪ್ರತಿನಿಧಿಗಳು, ಮುಖಂಡರು, ಸಾರ್ವಜನಿಕರು ಮಾದರಿ ನೀತಿ ಸಂಹಿತೆಯನ್ನು ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು.
ತಮ್ಮ ಕಛೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣಾ ಮಾದರಿ ನೀತಿ ಸಂಹಿತೆಯು ಇಂದಿನಿಂದ ಮೇ 15 ರವರೆಗೆ ಜಾರಿಯಲ್ಲಿರುತ್ತದೆ. ಮತದಾನವು ಮೇ 10 ರಂದು ನಡೆದು ಮತ ಏಣಿಕೆಯನ್ನು ಮೇ 13 ರಂದು ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಹೆಸರುಗಳು ಬಿಟ್ಟು ಹೋಗಿದ್ದರೆ ಏಪ್ರಿಲ್ 11 ರ ವರೆಗೆ ಸೇರಿಸಲು ಅವಕಾಶವಿದ್ದು, ಅವಶ್ಯಕ ದಾಖಲೆಗಳನ್ನು ಸಲ್ಲಿಸಿ ಅರ್ಜಿ ನಮೂನೆ 06 ನ್ನು ಭರ್ತಿ ಮಾಡಿ ನೀಡಬಹುದಾಗಿದೆ. ಅಲ್ಲದೆ ವೋಟರ್ ಹೆಲ್ಪ್ ಲೈನ್ ಆಪ್ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಜಿಲ್ಲೆಯಲ್ಲಿ 11 ವಿಧಾನಸಭಾ ಕ್ಷೇತ್ರಗಳಿದ್ದು ಪ್ರತಿಯೊಂದು ಕ್ಷೇತ್ರಕ್ಕೂ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ಈಗಾಗಲೇ ನೇಮಿಸಲಾಗಿದೆ. ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಲಾಗಿದೆ. ದಾಖಲೆಯಿಲ್ಲದ 50 ಸಾವಿಕ್ಕಿಂತ ಹೆಚ್ಚಿನ ಹಣವನ್ನು ಸಾಗಿಸುವಂತಿಲ್ಲ. ಚುನಾವಣಾ ಅಕ್ರಮಗಳು ಕಂಡುಬಂದರೆ ಸಿ.ವಿಜಿಲ್ ಆಪ್ ಮೂಲಕ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದಾಗಿದೆ. ವೋಟರ್ ಹೆಲ್ಪ್ ಲೈನ್ ಆಪ್ 1950 ಹಾಗೂ 0821-2305656 ಗೆ ಕರೆಮಾಡಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಅವಶ್ಯಕ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಒಟ್ಟು 2905 ಮತಗಟ್ಟೆಗಳಿದ್ದು, ಎಲ್ಲಾ ಮತಗಟ್ಟೆಗಳಿಗೆ ಅಗತ್ಯ ಕನಿಷ್ಠ ಸೌಲಭ್ಯಗಳಾದ ಕುಡಿಯುವ ನೀರು ಶೌಚಾಲಯ, ವಿದ್ಯುತ್ ಸಂಪರ್ಕ, ರ್ಯಾಂಪ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. 80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ, ವಿಶೇಷ ಚೇತನ, ಕೋವಿಡ್ ಶಂಕಿತ/ದೃಡಪಟ್ಟ ಮತದಾರರಿಗೆ ಹಾಗೂ ಅಗತ್ಯ ಸೇವೆಗಳ ಇಲಾಖೆಗಳ ನಿರತ ಅಧಿಕಾರಿ/ಸಿಬ್ಬಂದಿಗಳಿಗೆ ಈ ಬಾರಿ ವಿಶೇಷವಾಗಿ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅಂಚೆ ಮತಪತ್ರಕ್ಕೆ ನಮೂನೆ 12 ಡಿ ರಲ್ಲಿ ಇಂದಿನಿOದ ನಾಮಪತ್ರ ಸಲ್ಲಿಸಲು ಪ್ರಾರಂಭವಾದ ದಿನಾಂಕದಿಂದ 5 ದಿನಗಳೊಳಗಾಗಿ ಸಂಬOಧಪಟ್ಟ ಚುನಾವಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ ಎಂದರು
ಸಭೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತರಾದ ರಮೇಶ್.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜರಾಮ್, ಕಾಂಗ್ರೇಸ್ ಜಿಲ್ಲಾ ಮುಖಂಡರಾದ ಕೆ.ಸಿ.ಶೌಕತ್ ಪಾಷಾ, ಪ್ರಧಾನ ಕಾರ್ಯದರ್ಶಿ, ಉತ್ತನಹಳ್ಳಿ ಶಿವಣ್ಣ, ಜಾತ್ಯಾತೀತ ಜನತಾದಳದ ಮುಖಂಡರಾದ ಎಸ್.ನರಸಿಂಹಸ್ವಾಮಿ, ಹಿರಿಯ ಉಪಾಧ್ಯಕ್ಷರಾದ ಪಾಲ್ಕನ್ ಬೋರೇಗೌಡ, ಬಿಜೆಪಿ ಕಾನೂನು ವಿಭಾಗದ ಗೋಕುಲ್ ಗೋವರ್ದನ್, ನಗರ ಕಾರ್ಯದರ್ಶಿ ಹೆಚ್.ಪಿ.ಚೇತನ್, ಜಿಲ್ಲಾ ಕಾರ್ಯದರ್ಶಿ ಕಿರಣ್ ಜೈರಾಮ್ಗೌಡ ಸೇರಿದಂತೆ ವಿವಿಧ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.