ಹೈದರಾಬಾದ್: ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ರಾಮೋಜಿ ರಾವ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿರುವ ರಾಮೋಜಿ ರಾವ್ ಇಹಲೋಕ ತ್ಯಜಿಸಿದ್ದು, ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಭಾರತೀಯ ಮಾಧ್ಯಮದಲ್ಲಿ ಕ್ರಾಂತಿ ಮಾಡಿದ ರಾಮೋಜಿರಾವ್ ಅವರ ನಿಧನ ತೀವ್ರ ದುಃಖ ತಂದಿದೆ. ಪತ್ರಿಕೋದ್ಯಮ ಮತ್ತು ಚಿತ್ರರಂಗದಲ್ಲಿ ಅಚ್ಚಳಿಯದ ಛಾಪನ್ನು ಮೂಡಿಸಿದ್ದಾರೆ. ಅವರ ಅವಿರತ ಪ್ರಯತ್ನಗಳ ಫಲವಾಗಿ ಮಾಧ್ಯಮ ಮತ್ತು ಮನೋರಂಜನಾ ಜಗತ್ತಿನಲ್ಲಿ ಹೊಸ ನಾವೀನ್ಯತೆಯನ್ನು ಸೃಷ್ಟಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸಂತಾಪ ವ್ಯಕ್ತಪಡಿಸಿದ ಚಂದ್ರಬಾಬು ನಾಯ್ಡು: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿರುವ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು ಕೂಡ ಅವರ ನಿಧನಕ್ಕೆ ಆಘಾತ ವ್ಯಕ್ತಪಡಿಸಿದ್ದು, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಅವರು ಅದ್ಬುತ ಸಾಧನೆಗಳನ್ನು ಮಾಡಿದ್ದಾರೆ. ಎರಡು ತೆಲುಗು ರಾಜ್ಯಗಳು ಸೇರಿದಂತೆ ದೇಶಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ರಾಮೋಜಿ ರಾವ್ ಅವರ ಸಾವು ಕೇವಲ ತೆಲುಗು ಜನರಿಗೆ ಆದ ನಷ್ಟವಲ್ಲ, ಇಡೀ ದೇಶಕ್ಕಾದ ನಷ್ಟ. ಇದೇ ವೇಳೆ, ಅವರ ಜೊತೆಗಿನ ಒಡನಾಟವನ್ನು ಸ್ಮರಿಸಿರುವ ಅವರು, ಸತ್ಯ ಮತ್ತು ತಮ್ಮ ಮೌಲ್ಯಗಳಿಗಾಗಿ ಧೈರ್ಯದಿಂದ ಹೋರಾಡಿದ ಛಲಗಾರ ಎಂದು ಬಣ್ಣಿಸಿದ್ದಾರೆ.
ತೆಲುಗು ನಟ – ನಟಿಯರಿಂದ ಸಂತಾಪ: ಪ್ರಧಾನಿ ಹೊರತಾಗಿ ಅನೇಕ ತೆಲುಗು ಅಭಿಮಾನಿಗಳು, ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ನಟ ಚಿರಂಜೀವಿ ಕೂಡ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಮೋಜಿ ರಾವ್ ನಿರ್ಮಾಣದಲ್ಲಿ ನಿನ್ನು ಚೂಡಾಲನಿ ಚಿತ್ರದ ಮೂಲಕ ಸಿನಿ ಪಯಣ ಆರಂಭಿಸಿದ ನಟ ಜೂ ಎನ್ಟಿಆರ್ ಕೂಡ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.