ಬೀದರ್: ಕೇರಳದಲ್ಲಿ ಸೆರೆ ಹಿಡಿದು ಶುಕ್ರವಾರ ಮಧ್ಯರಾತ್ರಿ ಬಂಡೀಪುರಕ್ಕೆ ಮರಳಿ ತಂದ ತಣ್ಣೀರು ಎಂಬ ಹೆಸರಿನ ಕಾಡಾನೆಯ ಸಾವಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆ ಅತ್ಯಂತ ದುರದೃಷ್ಟಕರ ಎಂದು ಬಣ್ಣಿಸಿರುವ ಸಚಿವರು, ವನ್ಯಜೀವಿಗಳ ಹಿತದೃಷ್ಟಿಯಿಂದ ಯಾವುದೇ ವನ್ಯಜೀವಿಯನ್ನು ಇಂತಹ ರಾಜ್ಯಕ್ಕೆ ಸೇರಿದ್ದು ಎಂದು ಸೀಮಿತಗೊಳಿಸುವುದು ಸಮರ್ಥನೀಯವಲ್ಲ ಎಂದು ಹೇಳಿದ್ದಾರೆ.
ಅರಣ್ಯ ವನ್ಯಜೀವಿಗಳ ಆವಾಸಸ್ಥಾನವಾಗಿದೆ. ವನ್ಯ ಜೀವಿಗಳು ಅಲ್ಲಿ ಸ್ವಚ್ಛಂದವಾಗಿ ವಿಹರಿಸುತ್ತವೆ. ಆನೆಗಳು ಕೂಡ ತಮಿಳುನಾಡು, ಕೇರಳ, ಕರ್ನಾಟಕ, ಮಹಾರಾಷ್ಟ್ರದಾದ್ಯಂತ ಹಬ್ಬಿರುವ ಪಶ್ಚಿಮಘಟ್ಟದಲ್ಲಿ ಸಂಚರಿಸುತ್ತವೆ. ವಸ್ತು ಸ್ಥಿತಿ ಹೀಗಿರುವಾಗ ಯಾವುದೇ ವನ್ಯಜೀವಿಗೆ ನಿರ್ದಿಷ್ಟ ರಾಜ್ಯಕ್ಕೆ ಸೇರಿದ್ದು ಎಂದು ಹಣೆಪಟ್ಟಿ ಹಚ್ಚುವುದು ಸ್ವೀಕಾರಾರ್ಹವಲ್ಲ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.
ಯಾವುದೇ ರಾಜ್ಯದ ಅರಣ್ಯ ಸಿಬ್ಬಂದಿಯಾಗಲೀ, ಆ ರಾಜ್ಯದ ಜನರೇ ಆಗಲೀ ಇದು ಪಕ್ಕದ ರಾಜ್ಯದ ಆನೆ ಎಂದು ವರ್ಗೀಕರಿಸಿ, ಸೆರೆ ಹಿಡಿದು ಕಳುಹಿಸುವುದು ಸಮರ್ಥನೀಯವಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಕೇರಳ ರಾಜ್ಯದ ಅರಣ್ಯ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.
ಬಂಡೀಪುರ-ಮುದುಮಲೈ-ನಾಗರಹೊಳೆ ಮತ್ತು ವಯನಾಡ್ ಅರಣ್ಯ ಪ್ರದೇಶ ಪರಸ್ಪರ ಸಂಪರ್ಕಿತವಾದ ಭೂರಮೆಯಾಗಿದೆ. ವನ್ಯಜೀವಿಗಳಿಗೆ ನೈಸರ್ಗಿಕ ಗಡಿ, ಭಾಷೆ ಇರುವುದಿಲ್ಲ. ಪ್ರಾಣಿಗಳು ಆಹಾರ ಮತ್ತು ನೀರು ಮತ್ತು ಸಂಗಾತಿಯನ್ನು ಹುಡುಕಿಕೊಂಡು ಒಂದು ಕಾಡಿನಿಂದ ಮತ್ತೊಂದಕ್ಕೆ ಹೋಗುತ್ತವೆ. ಸಹಸ್ರಾರು ವರ್ಷಗಳಿಂದ ಪೂರ್ವ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವನ್ಯಜೀವಿಗಳು ಓಡಾಡಿಕೊಂಡಿವೆ. ಆನೆಗಳಿಗೆ ಕಾರಿಡಾರ್ ಇರುತ್ತದೆ. ನಾವು ಪ್ರಾಣಿಗಳ ಅರಣ್ಯವನ್ನೇ ಆಕ್ರಮಿಸುತ್ತಿದ್ದೇವೆ. ಹೀಗಾಗಿ ವನ್ಯ ಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದನ್ನು ಕಲಿಯಬೇಕು ಎಂದು ಹೇಳಿದ್ದಾರೆ.
ಕೇರಳದಲ್ಲಿ ತಣ್ಣೀರ್ ಆನೆಗೆ ಅರೆವಳಿಕೆಯನ್ನು ನೀಡುತ್ತಿರುವ ಮತ್ತು ನಂತರ ಆ ಆನೆಯನ್ನು ಸಾಕಾನೆಗಳ ನೆರವಿನಿಂದ ತಳ್ಳಿ ವಾಹನ ಹತ್ತಿಸಲಾಗಿರುವ ವಿಡಿಯೋ ವೈರಲ್ ಆಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಇದು ನೋವಿನ ಸಂಗತಿ. ಭವಿಷ್ಯದಲ್ಲಿ ಎಲ್ಲಿಯೂ ಇಂತಹ ಘಟನೆಗಳು ನಡೆಯಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಇತ್ತೀಚೆಗೆ ಹಾಸನ ಜಿಲ್ಲೆಯ ಬೇಲೂರು ಮತ್ತು ಸಕಲೇಶಪುರ ವಲಯಗಳಲ್ಲಿ ಸಂಚರಿಸುತ್ತಿದ್ದ 23 ಆನೆಗಳ ಪೈಕಿ ತಣ್ಣೀರ್ ಸಲಗ ಕೂಡ ಒಂದಾಗಿತ್ತು. ಅದನ್ನು ಸೆರೆ ಹಿಡಿದು ರೇಡಿಯೋ ಕಾಲರ್ ಅಳವಡಿಸಿದ ಬಳಿಕ ಆನೆಯನ್ನು ಕರ್ನಾಟಕದ ಬಂಡೀಪುರ ಅರಣ್ಯ ಪ್ರದೇಶದಲ್ಲಿ ಬಿಡಲಾಗಿತ್ತು. ಆನೆ ಕಬಿನಿ ನದಿ ದಾಟಿ ಕೇರಳದ ವಯನಾಡ್ ಗಡಿಗೆ ಹೋಗಿದೆ. ಅಲ್ಲಿ ಆನೆಯನ್ನು ಸೆರೆ ಹಿಡಿದು ನಮ್ಮ ರಾಜ್ಯಕ್ಕೆ ಕಳಿಸಲಾಗಿದೆ. ರಾಂಪುರ ಆನೆ ಶಿಬಿರಕ್ಕೆ ಮಧ್ಯರಾತ್ರಿಯಲ್ಲಿ ಕರೆತಂದಾಗ ಕೇರಳದ ಮೂವರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಕರ್ನಾಟಕದ ಅಧಿಕಾರಿಗಳು ಹಾಜರಿದ್ದರು.
ಎರಡೂ ರಾಜ್ಯಗಳ ಅಧಿಕಾರಿಗಳು ಮತ್ತು ಪಶುವೈದ್ಯರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮರಣೋತ್ತರ ವರದಿ ಬಂದ ನಂತರ ವಾಸ್ತವ ಅಂಶ ತಿಳಿಯಲಿದೆ. ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಖಂಡ್ರೆ ತಿಳಿಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.