ಮನೆ ಸುದ್ದಿ ಜಾಲ ಮಧು ಜಿ.ಮಾದೇಗೌಡಗೆ ಅಭಿನಂದನೆ

ಮಧು ಜಿ.ಮಾದೇಗೌಡಗೆ ಅಭಿನಂದನೆ

0

ಮೈಸೂರು (Mysuru): ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್‌ ಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಕಾಂಗ್ರೆಸ್‌ ಅಭ್ಯರ್ಥಿ ಮಧು ಜಿ.ಮಾದೇಗೌಡ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಅಭಿನಂದಿಸಲಾಯಿತು.

ನಗರದ ಕಾಂಗ್ರೆಸ್‌ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಶಾಲು ಹೊದಿಸಿ, ಹೂ ಗುಚ್ಛ ನೀಡಿ ಅಭಿನಂದಿಸಿ ಗೆಲವನ್ನು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಆರ್.ಧ್ರುವ ನಾರಾಯಣ್, ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ತನ್ವೀರ್ ಸೇಟ್, ವಿಧಾನಪರಿಷತ್ ಸದಸ್ಯರಾದ ಡಿ.ತಿಮ್ಮಯ್ಯ,ಮಾಜಿ ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಕಳಲೆ ಕೇಶವಮೂರ್ತಿ, ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಆರ್. ಮೂರ್ತಿ, ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ. ಬಿ.ಜೆ.ವಿಜಯ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮರಿಗೌಡ,  ಡಿ.ರವಿಶಂಕರ್,  ಹರೀಶ್ ಗೌಡ, ಬಿ.ಎಂ.ರಾಮು, ಎನ್.ಶಿವಣ್ಣ, ಭಾಸ್ಕರ್ ಗೌಡ, ಎಡತಲೆ ಮಂಜುನಾಥ್, ಮಂಜುನಾಥ್,  ಹುಣಸೂರು ಬಸವಣ್ಣ ಇತರ ಮುಖಂಡರು ಹಾಗೂ ಅಪಾರ ಅಭಿಮಾನಿಗಳು ಭಾಗವಹಿಸಿದ್ದರು.

ಹಿಂದಿನ ಲೇಖನಶಿಕ್ಷಕರು, ಪದವೀಧರು ಬದಲಾವಣೆ ಬಯಸಿದ್ದಾರೆ: ಸಿದ್ದರಾಮಯ್ಯ
ಮುಂದಿನ ಲೇಖನವಿಧಾನಪರಿಷತ್ ಫಲಿತಾಂಶ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಅಲ್ಲ: ನಳಿನ್‌ ಕುಮಾರ್‌ ಕಟೀಲ್‌