ಮನೆ ರಾಷ್ಟ್ರೀಯ ಕಾಂಗ್ರೆಸ್ – ಬಿಜೆಪಿ ಕಾರ್ಯರ್ತರ ಬಡಿದಾಟ, ಕಲ್ಲು ತೂರಾಟ..!

ಕಾಂಗ್ರೆಸ್ – ಬಿಜೆಪಿ ಕಾರ್ಯರ್ತರ ಬಡಿದಾಟ, ಕಲ್ಲು ತೂರಾಟ..!

0

ಪಾಟ್ನಾ : ಬಿಹಾರ ಚುನಾವಣಾ ಕಣ ರಣಾಂಗಣವಾಗಿ ಮಾರ್ಪಟ್ಟಿದೆ. ರಾಹುಲ್ ಗಾಂಧಿಯ ಮತದಾರರ ಅಧಿಕಾರ ಯಾತ್ರೆಯಲ್ಲಿ ಪ್ರಧಾನಿ ಮೋದಿಯವ್ರನ್ನು ನಿಂದಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಪಾಟ್ನಾದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟಿದೆ.

ರಸ್ತೆಯಲ್ಲೇ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಬಿಜೆಪಿಯ ಪ್ರತಿಭಟನಾ ಮೆರವಣಿಗೆ ಬಿಹಾರ ಕಾಂಗ್ರೆಸ್ ಕಚೇರಿ ಸದಾಕತ್ ಆಶ್ರಮ ಬಳಿ ಸಾಗುವಾಗ ನಡುವೆ ಘರ್ಷಣೆ ಸಂಭವಿಸಿದೆ.

ಮೊದಲು ವಾಗ್ವಾದ ಏರ್ಪಟ್ಟಿದ್ದು, ಬಳಿಕ ಅದು ವಿಕೋಪಕ್ಕೆ ತಿರುಗಿ ಪರಸ್ಪರ ಕೋಲಿನಿಂದ ಹೊಡೆದುಕೊಂಡಿದ್ದಾರೆ. ನಂತರ ಕಲ್ಲು ತೂರಾಟ ಕೂಡ ನಡೆದಿದೆ. ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕಾಂಗ್ರೆಸ್ ಕಚೇರಿಯ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೆವು ಎಂದು ಬಿಜೆಪಿ ಕಾರ್ಯಕರ್ತರು ಹೇಳಿಕೊಂಡಿದ್ದಾರೆ. ಮತ್ತೊಂದೆಡೆ, ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.