ಮನೆ ರಾಜಕೀಯ ‘ಚಿಂತೆ ಇಲ್ಲದವನಿಗೆ ಸಂತೆಲೂ ನಿದ್ದೆ’ ಎಂಬ ಮಾತು ಆರ್‌.ಅಶೋಕ್‌ ಅವರಿಗೆ ಹೇಳಿದ್ದೇನೋ: ಕಾಂಗ್ರೆಸ್ ವ್ಯಂಗ್ಯ

‘ಚಿಂತೆ ಇಲ್ಲದವನಿಗೆ ಸಂತೆಲೂ ನಿದ್ದೆ’ ಎಂಬ ಮಾತು ಆರ್‌.ಅಶೋಕ್‌ ಅವರಿಗೆ ಹೇಳಿದ್ದೇನೋ: ಕಾಂಗ್ರೆಸ್ ವ್ಯಂಗ್ಯ

0

ಬೆಂಗಳೂರು(Bengaluru): ‘ಚಿಂತೆ ಇಲ್ಲದವನಿಗೆ ಸಂತೆಯಲ್ಲಿ ನಿದ್ದೆ’ ಎಂಬ ಗಾದೆ ಮಾತನ್ನು ಕಂದಾಯ ಸಚಿವ ಆರ್‌.ಅಶೋಕ್‌ ಅವರಿಗಾಗಿಯೇ ಹೇಳಿರಬೇಕು ಎಂದು ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದೆ.

ಪ್ರವಾಹ ಪರಿಶೀಲನೆಯ ವಿಡಿಯೊ ಕಾನ್ಫರೆನ್ಸ್‌ ಸಂದರ್ಭದಲ್ಲಿ ಸಚಿವ ಅಶೋಕ್‌ ಅವರು ನಿದ್ದೆಗೆ ಜಾರಿದ್ದರು ಎಂಬ ಆರೋಪ ವ್ಯಕ್ತವಾದ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದೆ.

ಮುಳುಗುವುದರಲ್ಲಿ ಹಲವು ವಿಧಗಳಿವೆ. ರಾಜ್ಯದ ಜನ ಮಳೆ ನೀರಿನಲ್ಲಿ ಮುಳುಗಿದ್ದಾರೆ. ಇತ್ತ ಸಚಿವರು ನಿದ್ದೆಯಲ್ಲಿ ಮುಳುಗಿದ್ದಾರೆ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

‘ಹಲಾಲ್ ಕಟ್’ ಎಂದರೆ ಥಟ್ಟನೇ ಎಚ್ಚರವಾಗುವ ಸಚಿವರು ಪ್ರವಾಹ ಪರಿಶೀಲನೆ ವೇಳೆ ನಿದ್ದೆಗೆ ಜಾರಿದ್ದು ಹಾಸ್ಯಾಸ್ಪದ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಬಿಜೆಪಿ ಪ್ರಣಾಳಿಕೆಯ ಭರವಸೆಗಳು ಆಕರ್ಷಕ, ಮನಮೋಹಕ. ಆಡಳಿತ ಮಾತ್ರ ಜನತೆಗೆ ಯಾತನಾದಾಯಕ, ಭ್ರಷ್ಟಾಚಾರವೇ ಕಾಯಕ! ಬೆಂಗಳೂರನ್ನು ವಿಶ್ವದರ್ಜೆಯ ನಗರ ಮಾಡುವೆವು ಎಂದ ಬಿಜೆಪಿ ಈಗ ರಸ್ತೆಗುಂಡಿಗಳ ನಗರ, ಮುಳುಗುವ ನಗರವನ್ನಾಗಿ ಮಾಡಿದೆ. ಐಟಿ ಕಂಪೆನಿಗಳು ಗುಳೆ ಹೊರಟರೂ ಕೊಟ್ಟ ಭರವಸೆ ಬಿಜೆಪಿಗರಿಗೆ ನೆನಪಾಗಲಿಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಹಿಂದಿನ ಲೇಖನಮೈಸೂರು ಮೇಯರ್ ಚುನಾವಣೆ: ಜೆಡಿಎಸ್’ಗೆ ಮುಖಭಂಗ
ಮುಂದಿನ ಲೇಖನಆತ್ಮವಿಶ್ವಾಸವೇ ಸಾಧನೆಯ ಮೊದಲ ಹೆಜ್ಜೆ