ಮನೆ ರಾಜಕೀಯ ದಾಖಲೆಗಳಿಲ್ಲದಿದ್ದರೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ: ಬಿ.ವೈ.ವಿಜಯೇಂದ್ರ

ದಾಖಲೆಗಳಿಲ್ಲದಿದ್ದರೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪ: ಬಿ.ವೈ.ವಿಜಯೇಂದ್ರ

0

ಮೈಸೂರು(Mysuru): ಕಾಂಗ್ರೆಸ್ ಅಧಿಕಾರ ಹಿಡಿಯುವ ಆತುರದಲ್ಲಿರುವ ಕಾರಣ ದಾಖಲೆಗಳಿಲ್ಲದೆ ಕಾಂಗ್ರೆಸ್‌ ಆರೋಪ ಮಾಡುತ್ತಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಪಿಎಸ್ಐ ಹಗರಣವನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಸರ್ಕಾರ ಮುಂದಾಗಿದೆ. ತಮ್ಮ ಹುಳುಕನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಬಿಜೆಪಿ ಮೇಲೆ ಆರೋಪ ಮಾಡುತ್ತಿರುವುದಾಗಿ ಹೇಳಿದ್ದಾರೆ.

ಹಳೆ ಮೈಸೂರು ಭಾಗದ ಮೇಲೆ ಬಿಜೆಪಿ ಹಿರಿಯ ನಾಯಕರ ಒಲವು ಹೆಚ್ಚಾಗಿದೆ. ಈ ಬಾರಿ ವಿಶೇಷ ಕಾಳಜಿ ವಹಿಸಿ ಚುನಾವಣೆ ನಡೆಸಲಿದ್ದೇವೆ. ನನಗೂ ಮೈಸೂರು ಭಾಗದ ಮೇಲೆ ಹೆಚ್ಚಿನ ಒಲವಿದೆ. ಹಲವಾರು ಕಾರಣಗಳಿಂದ ಈ ಭಾಗದಲ್ಲಿ ತೊಡಗಿಸಿಕೊಳ್ಳಲು ಆಗಿರಲಿಲ್ಲ.

ಆದರೆ, ಈ ಬಾರಿ ಮೈಸೂರು ಭಾಗದಲ್ಲಿ ಹೆಚ್ಚು ಕೆಲಸ ಮಾಡುತ್ತೇನೆ. ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿಯೋದು ನಮ್ಮ ಗುರಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿ ಇಲ್ಲದಿರುವಾಗ 120 ಸ್ಥಾನಗಳನ್ನು ಗೆದ್ದು ನಾವೇ ಅಧಿಕಾರಕ್ಕೆ ಬರ್ತೀವಿ ಅಂತಾರೆ, ಅದರಲ್ಲಿ ತಪ್ಪೇನೂ ಇಲ್ಲ. ಕಡೆಯದಾಗಿ ಜನರು ಉತ್ತಮರಿಗೆ ಅಧಿಕಾರವನ್ನು ನೀಡುತ್ತಾರೆ ಎಂದು ಹೇಳಿದ್ದಾರೆ.

ಹಿಂದಿನ ಲೇಖನಒಂಟಿ ಮಹಿಳೆ ಮೇಲೆ ಅತ್ಯಾಚಾರ: ಸಂತ್ರಸ್ತೆಗೆ ಚಾಕು ಇರಿದು ಪರಾರಿಯಾದ ಕಾಮುಕರು
ಮುಂದಿನ ಲೇಖನಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಮಾಜಿ ಸಿಎಂ ಪುತ್ರ ಭಾಗಿ ಆರೋಪ: ಸಿಐಡಿಗೆ ವಕೀಲರಿಂದ ದೂರು