ಮನೆ ರಾಜ್ಯ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮೂಲಕ ಜನರಿಗೆ ಮೋಸ ಮಾಡಲು ಹೊರಟಿದೆ: ಶೋಭಾ ಕರಂದ್ಲಾಜೆ

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮೂಲಕ ಜನರಿಗೆ ಮೋಸ ಮಾಡಲು ಹೊರಟಿದೆ: ಶೋಭಾ ಕರಂದ್ಲಾಜೆ

0

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಸುಳ್ಳು ಭರವಸೆ, ಜನರನ್ನು ಮೋಸ ಮಾಡಲು ಗ್ಯಾರಂಟಿ ಕಾರ್ಡ್ ಕೊಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಒಂದು ಜವಾಬ್ದಾರಿಯುತ ಪಕ್ಷ ಎಂದು ಅಂದುಕೊಂಡಿದ್ದೇವೆ. ಕಾಂಗ್ರೆಸ್ ಟಿಕೆಟ್ ಲೈಟ್ ಕಂಬಕ್ಕೆ ಕೊಟ್ರು ಗೆದ್ದು ಬರುತ್ತೆ ಅನ್ನುವ ಕಾಲ ಇತ್ತು. ಆದರೆ ಸುಳ್ಳು ಭರವಸೆ ಕೊಟ್ಟು ಇಂದು ಅಧಿಕೃತ ವಿರೋಧ ಪಕ್ಷದ ಸ್ಥಾನ ಸಹ ಇಲ್ಲದಂತೆ ಆಗಿದೆ. ಕರ್ನಾಟಕ ಚುನಾವಣಾ ದೃಷ್ಟಿಯಿಂದ ಗ್ಯಾರೆಂಟಿ ಕಾರ್ಡ್ ಕೊಡುತ್ತಿದ್ದಾರೆ. ಇದೇ ರೀತಿಯಲ್ಲಿ ರಾಜಸ್ಥಾನದಲ್ಲಿ ಗ್ಯಾರಂಟಿ ಕಾರ್ಡ್ ಕೊಟ್ಟಿದ್ದರು. ಆದರೆ ಕೊಟ್ಟ ಭರವಸೆ ಈಡೇರಿಸಿಲ್ಲ ಎಂದರು.

ಅಷ್ಟೇ ಅಲ್ಲ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ಭರವಸೆ ಕೊಟ್ಟಿದ್ದಾರೆ. ಆದರೆ ಅದೂ ಈಡೇರಿಸಿಲ್ಲ. ಚುನಾವಣೆ ಘೋಷಣೆ ಆಗುವ ಮೊದಲು ಗ್ಯಾರಂಟಿ ಕಾರ್ಡ್ ಹಂಚಿಕೆ ಮಾಡ್ತಿದ್ದಾರೆ. 200 ಯುನಿಟ್ ಉಚಿತ ವಿದ್ಯುತ್,2000 ರೂಪಾಯಿ ಮಹಿಳೆಗೆ,ಹತ್ತು ಕೆಜಿ ಅಕ್ಕಿ ಕೊಡುವ ಭರವಸೆ ಕೊಟ್ಟಿದ್ದಾರೆ. ಫ್ರೀ ಗ್ಯಾರಂಟಿ ಯೋಜನೆ ಕೊಡಲು ಹಣ ಎಲ್ಲಿಂದ ತರುತ್ತೀರಿ? ಕರ್ನಾಟಕದ ಬಜೆಟ್ ನಲ್ಲಿ ಈ ಯೋಜನೆ ಕೊಡಲು ಸಾಧ್ಯವೇ ಇಲ್ಲ ಎಂದರು.

ಸಂಧ್ಯಾ ಸುರಕ್ಷಾ ಯೋಜನೆ ಕೊಟ್ಟವರು ಯಡಿಯೂರಪ್ಪನವರು ಘೋಷಣೆ ಮಾಡಿದ್ದರು. ವಿಧವೆ ವೇತನ ಹೆಚ್ಚು ಮಾಡಿ ಒಂದು ಸಾವಿರ ಕೊಡ್ತಿರುವುದು ನಮ್ಮ ಸರ್ಕಾರ. ಉದ್ಯೋಗ ಸೃಷ್ಟಿ ಮಾಡುವ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ. ಯುದ್ದೋಪಾದಿಯಲ್ಲಿ ಕೆಲಸ ಮಾಡ್ತಿದ್ದಾರೆ ಎಂದರು.

ಹಿಂದಿನ ಲೇಖನಹೈದರಾಬಾದ್: ಖಾಸಗಿ ಬಸ್ ಡಿಕ್ಕಿಯಾಗಿ 14 ಹಸುಗಳ ಸಾವು
ಮುಂದಿನ ಲೇಖನಸ್ವಯಂ ಕೃಷಿಯಿಂದ ಮಾತ್ರ ನಾಯಕರಾಗಲು ಸಾಧ್ಯ: ತೇಜಸ್ವಿ ಸೂರ್ಯ