ಮನೆ ರಾಜಕೀಯ ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ: ಸಿಎಂ ಬೊಮ್ಮಾಯಿ

ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ: ಸಿಎಂ ಬೊಮ್ಮಾಯಿ

0

ಬೆಂಗಳೂರು: ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

Join Our Whatsapp Group

ಅಮುಲ್ ಉತ್ಪನ್ನಗಳು ಬೆಂಗಳೂರಿನಲ್ಲಿ ಮಾರಾಟವಾಗುವ ಬಗ್ಗೆ ತೀವ್ರ ಚರ್ಚೆಯಾಗುತ್ತಿರುವ ಕುರಿತು ದೆಹಲಿಯಲ್ಲಿ ಶನಿವಾರ ಪ್ರತಿಕ್ರಿಯಿಸಿದ ಅವರು, ಕೆಎಂಎಫ್​​ನ ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್. ನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂ.1 ಸ್ಥಾನಕ್ಕೆ ಏಳಿಗೆ ಹೊಂದಲಿದೆ ಎಂದು ಹೇಳಿದರು.

ಅಮುಲ್ ಬ್ರ್ಯಾಂಡ್​ ವಿಚಾರವಾಗಿ ಯಾರೂ ಆತಂಕಪಡಬೇಕಿಲ್ಲ. ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ವೃದ್ಧಿಗೆ​ ಮತ್ತಷ್ಟು ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಈ ಮಧ್ಯೆ, ನಂದಿನಿ ಬ್ರ್ಯಾಂಡ್ ವಿಚಾರವಾಗಿ ಸ್ಪಷ್ಟನೆ ನೀಡಿದ ಸಚಿವ ಸುಧಾಕರ್, ಹಾಲಿಗೆ ಪ್ರೋತ್ಸಾಹ ಧನ‌ ಕೊಟ್ಟಿದ್ದರೆ‌ ಅದು‌ ಬಿಜೆಪಿ ಸರ್ಕಾರ. ಪ್ರತಿ‌ ಲೀಟರ್ ಗೆ 5 ರೂ. ಪ್ರೋತ್ಸಾಹ ಧನ ಬಿಜೆಪಿ ಸರ್ಕಾರ ಕೊಟ್ಟಿದೆ. ಕೆಎಂಎಫ್ ಆದಾಯದಲ್ಲಿ ಹಾಲು ಉತ್ಪಾದಕರಿಗೆ‌ ಕೊಡುವ ವ್ಯವಸ್ಥೆ ಮಾಡಲಾಗಿದೆ. ನಂದಿನಿ‌ ಹಾಲನ್ನು ಕೇವಲ ರಾಜ್ಯಕ್ಕೆ ಸೀಮಿತ ಮಾಡಬೇಡಿ. ಈಗಾಗಲೇ ಸೇನೆಗೆ, ತಿರುಪತಿ ತಿರುಮಲ,‌ ಮಹಾರಾಷ್ಟ್ರಕ್ಕೆ ನಮ್ಮ ಹಾಲು ಪೂರೈಕೆಯಾಗುತ್ತಿದೆ.

ಈ ರೀತಿಯ ರಾಜಕೀಯ ಮಾಡುವುದನ್ನು ಬಿಡಬೇಕು, ಕಾಮಾಲೆ ಕಣ್ಣಿನಿಂದ ನೋಡುವುದನ್ನು ಬಿಡಿ ಎಂದು ಕಾಂಗ್ರೆಸ್​ ಅನ್ನು ಉದ್ದೇಶಿಸಿ ಸುಧಾಕರ್ ಹೇಳಿದ್ದಾರೆ.

ಹಿಂದಿನ ಲೇಖನಕೊರೊನಾ: ಒಂದೇ ದಿನದಲ್ಲಿ  6 ಸಾವಿರ ಪ್ರಕರಣ
ಮುಂದಿನ ಲೇಖನಪ್ರೀತಿಸಿದವನಿಗಾಗಿ ನಿಶ್ಚಿತಾರ್ಥ ಮಾಡಿಕೊಂಡ ಯುವಕನಿಗೆ ಚೂರಿ ಇರಿದ ಅಪ್ರಾಪ್ತೆ