ಮನೆ ರಾಷ್ಟ್ರೀಯ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ನಾಮನಿರ್ದೇಶನ ಬಯಸಿ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ನಾಮನಿರ್ದೇಶನ ಬಯಸಿ ನಾಮಪತ್ರ ಸಲ್ಲಿಕೆ

0

ಜೈಪುರ (ರಾಜಸ್ಥಾನ): ಕಾಂಗ್ರೆಸ್​ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ನಾಮನಿರ್ದೇಶನ ಬಯಸಿ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಜೊತೆ ರಾಜಸ್ಥಾನಕ್ಕೆ ಪ್ರಯಾಣ ಆರಂಭಿಸಿದ್ದಾರೆ.

ಆರೋಗ್ಯ ಕಾರಣದಿಂದಾಗಿ ಅವರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಹಿಂದೇಟು ಹಾಕಿದ್ದು, ರಾಜ್ಯಸಭೆಗೆ ಆಯ್ಕೆ ಬಯಸಿದ್ದಾರೆ. ಉತ್ತರಪ್ರದೇಶದ ರಾಯ್ ​ಬರೇಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸೋನಿಯಾ ಅವರು ಇದೇ ಮೊದಲ ಬಾರಿಗೆ ಸಂಸತ್ತಿನ ಮೇಲ್ಮನೆಗೆ ಅಡಿ ಇಡಲು ಮುಂದಾಗಿದ್ದಾರೆ. ಹೀಗಾಗಿ ಅವರು ವಸಂತ ಪಂಚಮಿಯ ಶುಭದಿನವಾದ ಇಂದೇ ಅವರು ನಾಮಪತ್ರ ಸಲ್ಲಿಕೆ ಮಾಡಲಿದ್ದು, ದೆಹಲಿಯ ತಮ್ಮ ನಿವಾಸದಿಂದ ಕೆಲ ನಾಯಕರ ಜೊತೆಗೆ ರಾಜಸ್ಥಾನಕ್ಕೆ ಹೊರಟಿದ್ದಾರೆ.

ದೆಹಲಿಯಿಂದ ಎರಡು ಚಾರ್ಟರ್ ವಿಮಾನಗಳ ಮೂಲಕ ಎಲ್ಲ ನಾಯಕರು ಜೈಪುರ ತಲುಪಲಿದ್ದು, ವಿಮಾನ ನಿಲ್ದಾಣದಿಂದ ವಿಧಾನಸಭೆಗೆ ತೆರಳಲಿದ್ದಾರೆ. ಬಳಿಕ ಸೋನಿಯಾ ಮತ್ತು ರಾಹುಲ್ ಗಾಂಧಿ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಳಿಕ ಬೆಳಗ್ಗೆ 11.30 ಕ್ಕೆ ವಿಧಾನಸಭೆಗೆ ತೆರಳಿ ರಾಜ್ಯಸಭೆಗೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಲಿದ್ದಾರೆ.

ಈ ವೇಳೆ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋಟಸಾರಾ ಮತ್ತು ವಿರೋಧ ಪಕ್ಷದ ನಾಯಕ ಟಿಕಾರಾಂ ಜೂಲಿ ಅವರು ಸಾಕ್ಷಿಯಾಗಲಿದ್ದಾರೆ.

ಹಿಂದಿನ ಲೇಖನಆಸ್ತಿ ತೆರಿಗೆ ಬಾಕಿ: ರಾಕ್ ​ಲೈನ್​ ವೆಂಕಟೇಶ್ ಒಡೆತನದ ರಾಕ್ ​ಲೈನ್ ಮಾಲ್ ​ಗೆ ಬೀಗಮುದ್ರೆ ಹಾಕಿದ ಬಿಬಿಎಂಪಿ
ಮುಂದಿನ ಲೇಖನಫೆ.16ರಂದು ಗ್ರಾಮೀಣ ಭಾರತ ಬಂದ್ ಗೆ ಕರೆ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ