ಮನೆ ರಾಜ್ಯ ಕಾಂಗ್ರೆಸ್ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ?: ಸಂಸದ ಪ್ರತಾಪ್ ಸಿಂಹ

ಕಾಂಗ್ರೆಸ್ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ?: ಸಂಸದ ಪ್ರತಾಪ್ ಸಿಂಹ

0

ಮೈಸೂರು(Mysuru): ಗೋಕಳ್ಳರಿಗೆ ಏಟು ಬಿದ್ದರೆ ಬೊಬ್ಬೆ ಹೊಡೆಯುತ್ತಾರೆ. ಕಾಂಗ್ರೆಸ್ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಟ್ವೀಟ್ ಮಾಡಿದರೆ ನಿಮ್ಮ ಕೆಲಸ ಮುಗಿಯಿತಾ ? ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ರಾಜಸ್ತಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳೊಂದಿಗೆ  ಮಾತನಾಡಿದ ಅವರು, ಕರ್ನಾಟಕದಲ್ಲೂ ಕಾಂಗ್ರೆಸ್​ಗೆ ಅಧಿಕಾರ ಕೊಟ್ಟರೆ ಇದೇ ಪರಿಸ್ಥಿತಿ ಉಂಟಾಗುತ್ತದೆ. ಇದು ಕರ್ನಾಟಕದ ಜನರಿಗೆ ಎಚ್ಚರಿಕೆ ಗಂಟೆ ಎಂದು ಹೇಳಿದರು.

ರಾಜಸ್ಥಾನ ಸರ್ಕಾರದ ಮೇಲೆ ನನಗೆ ವಿಶ್ವಾಸವಿಲ್ಲ. ಹಿಂದುಗಳ ಧ್ವನಿ ಅಡಗಿಸಲು ಈ ಕೃತ್ಯ ನಡೆದಿದೆ. ಇದರ ಹಿಂದೆ ಕಾಂಗ್ರೆಸ್ ಇದೆ. ಕಾಂಗ್ರೆಸ್​ನವರ ಮುಸ್ಲಿಂ ಓಲೈಕೆಯಿಂದ ಈ ರೀತಿ ನಡೆಯುತ್ತಿದೆ ಎಂದು ಆರೋಪಿಸಿದರು.

ಒಳ್ಳೆಯ ಮುಸ್ಲಿಮರು ಯಾಕೆ ಈಗ ಮಾತಾಡ್ತಿಲ್ಲ? ಈ ಕೊಲೆ ತಪ್ಪು ಅಂತಾ ಆರೋಪಿಗಳ ವಿರುದ್ಧ ಫತ್ವಾ ಹೊರಡಿಸಲಿ ನೋಡೋಣಾ? ಶುಕ್ರವಾರ ಪ್ರಾರ್ಥನೆಯಾದ ನಂತರ ಕಲ್ಲು ತೂರುವಂತೆ ಹೇಳುವುದು ನಿಮ್ಮ ಕೆಲಸವಾ? ಎಂದು ಕಿಡಿಕಾರಿದ್ದಾರೆ.

ಹಿಂದಿನ ಲೇಖನ2000 ಅಗ್ನಿಶಾಮಕ ಹುದ್ದೆಗಳ ಭರ್ತಿ: ಆರಗ ಜ್ಞಾನೇಂದ್ರ
ಮುಂದಿನ ಲೇಖನಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ