ಬೆಂಗಳೂರು(Bengaluru): ಸದ್ಯದ ಬೆಂಗಳೂರಿನ ಪರಿಸ್ಥಿತಿಗೆ ಕಾಂಗ್ರೆಸ್ ಸರ್ಕಾರದ ಅವಧಿಗೆ ದುರಾಡಳಿತ ಕಾರಣ. ಯಾವುದೇ ಯೋಜನಾಬದ್ಧವಿಲ್ಲದ ಆಡಳಿತ ಇದಕ್ಕೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರವಧಿಯಲ್ಲಿ ಕರೆಯ ಅಕ್ಕಪಕ್ಕದಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗಿತ್ತು. ಕೆರೆ ನಿರ್ವಹಣೆ ಮಾಡುವಲ್ಲಿ ವಿಫಲವಾಗಿತ್ತು ಎಂದು ಆರೋಪಿಸಿದರು.
ಕಳೆದ ಐದಾರು ದಿನಗಳಲ್ಲಿ ಕರ್ನಾಟಕ ಸೇರಿದಂತೆ ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗಿದೆ. ಕಳೆದ 19 ವರ್ಷ ಇಷ್ಟು ಪ್ರಮಾಣದಲ್ಲಿ ಮಳೆ ಸುರಿದಿಲ್ಲ. ಕೆರೆಗಳು ತುಂಬಿ ಹರಿಯುತ್ತಿದೆ. ಪ್ರತಿ ದಿನಯೂ ಎಡೆಬಿಡದೆ ಮಳೆಯಾಗುತ್ತಿದೆ ಎಂದು ವಿವರಿಸಿದರು.
ಆದರೆ ಹೊರಗಡೆ ಬಿಂಬಿತವಾಗುವಂತೆ ಪೂರ್ಣ ಬೆಂಗಳೂರಿಗೆ ಮಳೆಯಿಂದ ಸಮಸ್ಯೆ ಆಗಿಲ್ಲ. ನಗರದ ಎರಡು ಝೋನ್’ಗಳಲ್ಲಿ ಮಾತ್ರ ಸಮಸ್ಯೆ ಆಗಿದೆ. ಅದರಲ್ಲೂ ಮಹದೇವಪುರ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎಂದರು. ಈ ವ್ಯಾಪ್ತಿಯಲ್ಲಿ 69 ಕೆರೆಗಳು ಇವೆ. ಎಲ್ಲವೂ ತುಂಬಿ ಹರಿಯುತ್ತಿದೆ ಎಂದ ಅವರು ಪ್ರವಾಹ ಸೃಷ್ಟಿಗೆ ರಾಜಕಾಲುವೆ ಅತಿಕ್ರಮಣವೂ ಕೂಡಾ ಒಂದು ಕಾರಣ ಎಂದರು.
ಮಳೆ ಹಾನಿ ಪರಿಹಾರಕ್ಕಾಗಿ ಸರ್ಕಾರ ಹಾಗೂ ಅಧಿಕಾರಿಗಳು 24/7 ಕೆಲಸ ಮಾಡುತ್ತಿದ್ದಾರೆ. ರಾಜಕಾಲುವೆ ಅತಿಕ್ರಮಣ ತೆರವುಗೊಳಿಸಲಾಗುತ್ತಿದೆ. ಮಳೆ ಹಾನಿ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. ನೀರು ತೆರವು ಕಾರ್ಯಾಚರಣೆ ನಡೆಯುತ್ತಿದೆ ಎಂದು ವಿವರಿಸಿದರು.
ಇದು ಸವಾಲಿನ ಪರಿಸ್ಥಿತಿಯಾಗಿದೆ. ಸರ್ಕಾರ ಇದನ್ನು ಉತ್ತಮವಾಗಿ ನಿರ್ವಹಣೆ ಮಾಡುವ ಪ್ರಯತ್ನ ನಡೆಸುತ್ತಿದೆ. ಈಗಾಗಲೇ 300 ಕೋಟಿ ಬಿಡುಗಡೆ ಮಾಡಲಾಗಿದೆ. ರಾಜಕಾಲುವೆ ಒತ್ತವರಿ ತೆರವುಗೊಳಿಸಲಾಗುತ್ತಿದೆ. ಭವಿಷ್ಯದಲ್ಲಿ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಳೆಯಿಂದ ಹಾನಿಯಾದ ಎರಡು ಪಂಪ್ ಹೌಸ್ ನಾಳೆ ಸರಿಯಾಗಲಿದೆ. ಆದರೆ ನಗರಕ್ಕೆ ನೀರು ಸರಬರಾಜು ಆಮಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಟ್ಯಾಂಕರ್ ಮೂಲಕವೂ ನೀರಿನ ಪೂರೈಕೆ ಮಾಡಲಾಗುತ್ತಿದೆ ಎಂದರು.
ಬರುತ್ತಿದೆ ಅಯೋಧ್ಯ ರಾಮನ "ಬಯೋ ಪಿಕ್"…
ವಿಶ್ವ ದಾಖಲೆ ನಿರ್ಮಿಸಿದ ಭಾರತೀಯ ಬಾಲಕಿ…
ವಿಮಾನದಲ್ಲಿ ನಮಾಜ್
ಬಿಡುಗಡೆಯಾಗಿದೆ, ಜಗತ್ತಿನ ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿ
ನಟಿ ಹರ್ಷಿಕ ಪೂರ್ಣಚ್ಚ ಹಾಗೂ ನಟ ಭುವನ್ ಮೇಲೆ ಹಲ್ಲೆ.
ಶಿಲ್ಪಾ ಶೆಟ್ಟಿ ರಾಜ್ ಕುಂದ್ರಾಗೆ ಎದುರಾಗಿದೆ ಸಂಕಷ್ಟ
ಮತದಾನದ ನಂತರ ಸಾವನಪ್ಪಿದ ವೃದ್ಧ….
ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ…
ಜೈ ಶ್ರೀ ರಾಮ್ ಎಂದು ಕೂಗಿದ್ದಕ್ಕೆ, ಮುಸ್ಲಿಂ ಯುವಕರಿಂದ ಹಲ್ಲೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.