ಮನೆ ರಾಜ್ಯ ಸದ್ಯದ ಬೆಂಗಳೂರಿನ ಪರಿಸ್ಥಿತಿಗೆ ಕಾಂಗ್ರೆಸ್’ನ ದುರಾಡಳಿತ ಕಾರಣ: ಸಿಎಂ ಬೊಮ್ಮಾಯಿ

ಸದ್ಯದ ಬೆಂಗಳೂರಿನ ಪರಿಸ್ಥಿತಿಗೆ ಕಾಂಗ್ರೆಸ್’ನ ದುರಾಡಳಿತ ಕಾರಣ: ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಸದ್ಯದ ಬೆಂಗಳೂರಿನ ಪರಿಸ್ಥಿತಿಗೆ ಕಾಂಗ್ರೆಸ್ ಸರ್ಕಾರದ ಅವಧಿಗೆ ದುರಾಡಳಿತ ಕಾರಣ. ಯಾವುದೇ ಯೋಜನಾಬದ್ಧವಿಲ್ಲದ ಆಡಳಿತ ಇದಕ್ಕೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ.

ನಗರದಲ್ಲಿಂದು  ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರವಧಿಯಲ್ಲಿ ಕರೆಯ ಅಕ್ಕಪಕ್ಕದಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗಿತ್ತು. ಕೆರೆ ನಿರ್ವಹಣೆ ಮಾಡುವಲ್ಲಿ ವಿಫಲವಾಗಿತ್ತು ಎಂದು ಆರೋಪಿಸಿದರು.

ಕಳೆದ ಐದಾರು ದಿನಗಳಲ್ಲಿ ಕರ್ನಾಟಕ ಸೇರಿದಂತೆ ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗಿದೆ. ಕಳೆದ 19 ವರ್ಷ ಇಷ್ಟು ಪ್ರಮಾಣದಲ್ಲಿ ಮಳೆ ಸುರಿದಿಲ್ಲ. ಕೆರೆಗಳು ತುಂಬಿ ಹರಿಯುತ್ತಿದೆ. ಪ್ರತಿ ದಿನಯೂ ಎಡೆಬಿಡದೆ ಮಳೆಯಾಗುತ್ತಿದೆ ಎಂದು ವಿವರಿಸಿದರು.

ಆದರೆ ಹೊರಗಡೆ ಬಿಂಬಿತವಾಗುವಂತೆ ಪೂರ್ಣ ಬೆಂಗಳೂರಿಗೆ ಮಳೆಯಿಂದ ಸಮಸ್ಯೆ ಆಗಿಲ್ಲ. ನಗರದ ಎರಡು ಝೋನ್’ಗಳಲ್ಲಿ ಮಾತ್ರ ಸಮಸ್ಯೆ ಆಗಿದೆ. ಅದರಲ್ಲೂ ಮಹದೇವಪುರ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಉಂಟಾಗಿದೆ ಎಂದರು. ಈ ವ್ಯಾಪ್ತಿಯಲ್ಲಿ 69 ಕೆರೆಗಳು ಇವೆ. ಎಲ್ಲವೂ ತುಂಬಿ ಹರಿಯುತ್ತಿದೆ ಎಂದ ಅವರು ಪ್ರವಾಹ ಸೃಷ್ಟಿಗೆ ರಾಜಕಾಲುವೆ ಅತಿಕ್ರಮಣವೂ ಕೂಡಾ ಒಂದು ಕಾರಣ ಎಂದರು.

ಮಳೆ ಹಾನಿ ಪರಿಹಾರಕ್ಕಾಗಿ ಸರ್ಕಾರ ಹಾಗೂ ಅಧಿಕಾರಿಗಳು 24/7 ಕೆಲಸ ಮಾಡುತ್ತಿದ್ದಾರೆ. ರಾಜಕಾಲುವೆ ಅತಿಕ್ರಮಣ ತೆರವುಗೊಳಿಸಲಾಗುತ್ತಿದೆ. ಮಳೆ ಹಾನಿ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. ನೀರು ತೆರವು ಕಾರ್ಯಾಚರಣೆ ನಡೆಯುತ್ತಿದೆ ಎಂದು ವಿವರಿಸಿದರು.

ಇದು ಸವಾಲಿನ ಪರಿಸ್ಥಿತಿಯಾಗಿದೆ. ಸರ್ಕಾರ ಇದನ್ನು ಉತ್ತಮವಾಗಿ ನಿರ್ವಹಣೆ ಮಾಡುವ ಪ್ರಯತ್ನ ನಡೆಸುತ್ತಿದೆ. ಈಗಾಗಲೇ 300 ಕೋಟಿ ಬಿಡುಗಡೆ ಮಾಡಲಾಗಿದೆ. ರಾಜಕಾಲುವೆ ಒತ್ತವರಿ ತೆರವುಗೊಳಿಸಲಾಗುತ್ತಿದೆ. ಭವಿಷ್ಯದಲ್ಲಿ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಳೆಯಿಂದ ಹಾನಿಯಾದ ಎರಡು ಪಂಪ್ ಹೌಸ್ ನಾಳೆ ಸರಿಯಾಗಲಿದೆ. ಆದರೆ ನಗರಕ್ಕೆ ನೀರು ಸರಬರಾಜು ಆಮಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಟ್ಯಾಂಕರ್ ಮೂಲಕವೂ ನೀರಿನ ಪೂರೈಕೆ ಮಾಡಲಾಗುತ್ತಿದೆ ಎಂದರು.

ಹಿಂದಿನ ಲೇಖನಮೈಸೂರು ಮೇಯರ್, ಉಪಮೇಯರ್ ಚುನಾವಣೆ: ಮೂರು ಪಕ್ಷದ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಮುಂದಿನ ಲೇಖನಮೆಟ್ರೊ ಕಾಮಗಾರಿ: ‘ಭಾರಿ ಮಳೆಗೆ ಸಸಿಗಳು ಕೊಚ್ಚಿ ಹೋಗಿಲ್ಲವೆಂದು ಹೇಗೆ ಗೊತ್ತು?’ ಹೈಕೋರ್ಟ್‌ ಪ್ರಶ್ನೆ; ವರದಿಗೆ ಸೂಚನೆ