ಬೆಂಗಳೂರು: ಕೆಆರ್ ಐಡಿಎಲ್ ಕಾಮಗಾರಿ ಸಂಬಂಧ ಸಚಿವರ ವಿರುದ್ಧ ಅಸಮಾಧಾನಗೊಂಡು ಸಿಎಂ ಸಿದ್ದರಾಮಯ್ಯಗೆ ಅಳಂದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಅವರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಇಂದು ಈ ಕುರಿತು ಮಾತನಾಡಿದ ಆರ್.ಅಶೋಕ್, ಸರ್ಕಾರದ ವಿರುದ್ದ ಕಾಂಗ್ರೆಸ್ ಶಾಸಕರೇ ದಂಗೆ ಎದ್ದಿದ್ದಾರೆ. ನಾವು ಇದನ್ನ ಮೊದಲಿನಿಂದಲೂ ಹೇಳುತ್ತಿದ್ದೇವೆ. ಬಿಆರ್ ಪಾಟೀಲ್ 2ನೇ ಬಾರಿ ಸಿಎಂಗೆ ಪತ್ರ ಬರೆದಿದ್ದಾರೆ. ಬಿ. ಆರ್ ಪಾಟೀಲ್ ರಂಥ ಧೈರ್ಯವಂತರು ಮಾತ್ರ ಮಾತನಾಡಿದ್ದಾರೆ. ಉಳಿದವರು ಹೆದರಿ ಕುಳಿತಿದ್ದಾರೆ. ಸಚಿವರು ಹೆದರಿಸುತ್ತಿದ್ದಾರೆ. ಮಂತ್ರಿಗಳ ಪಿಎಗಳೂ ಸಹ ದಂಧೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ನಿನ್ನೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದ ಶಾಸಕ ಬಿಆರ್ ಪಾಟೀಲ್, ಕೆಆರ್ ಐಡಿಎಲ್ ಗೆ ನೀಡಿದ್ದ ಕಾಮಗಾರಿಗಳ ಸಂಬಂಧ ನನ್ನ ವಿರುದ್ದ ಲಂಚ ಪಡೆದು ಕಾಮಗಾರಿಗಳನ್ನ ನೀಡಿದ್ದಾರೆ ಎಂಬ ಆರೋಪ ಬಂದಿದೆ. ಇಂಥ ಆರೋಪಗಳನ್ನ ಹೊತ್ತು ಆಧಿವೇಶನಕ್ಕೆ ಬರುವುದು ಸರಿಯಲ್ಲ. ಅಧಿವೇಶನಕ್ಕೆ ಬಂದರೆ ಆರೋಪ ಒಪ್ಪಿಕೊಂಡಂತಾಗುತ್ತದೆ. ಹೀಗಾಗಿ ನನ್ನ ವಿರುದ್ದದ ಆರೋಪಗಳ ಸಂಬಂಧ ತನಿಖೆಗೆ ಆದೇಶಿಸಿ. ಆರೋಪ ಸತ್ಯಾಸತ್ಯತೆ ಹೊರಬರಲು ತನಿಖೆಗೆ ಆದೇಶ ನೀಡಿ. ಆರೋಪ ಸಾಬೀತಾದರೇ ರಾಜೀನಾಮೆಗೆ ಸಿದ್ದನಿದ್ದೇನೆ ಎಂದು ಬಿಆರ್ ಪಾಟೀಲ್ ಪತ್ರದಲ್ಲಿ ತಿಳಿಸಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.