ಮನೆ ರಾಜಕೀಯ ಕಾಂಗ್ರೆಸ್ ಪ್ರತಿಭಟನೆ: ಸಿಎಂ ಬೊಮ್ಮಾಯಿ, ಸಚಿವ ಈಶ್ವರಪ್ಪ ನಿವಾಸಕ್ಕೆ ಹೆಚ್ಚುವರಿ ಭದ್ರತೆ

ಕಾಂಗ್ರೆಸ್ ಪ್ರತಿಭಟನೆ: ಸಿಎಂ ಬೊಮ್ಮಾಯಿ, ಸಚಿವ ಈಶ್ವರಪ್ಪ ನಿವಾಸಕ್ಕೆ ಹೆಚ್ಚುವರಿ ಭದ್ರತೆ

0

ಬೆಂಗಳೂರು(Bengaluru): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಲ್ಲಿ ನೇರ ಆರೋಪ ಎದುರಿಸುತ್ತಿರುವ ಸಚಿವ ಕೆ.ಎಸ್ ಈಶ್ವರಪ್ಪ(K.S.EShwarappa) ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್​​ನಿಂದ ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದ್ದು,  ಸಿಎಂ ಬಸವರಾಜ ಬೊಮ್ಮಾಯಿ(Basavaraja Bommai) ಅವರ ಖಾಸಗಿ ನಿವಾಸ, ಸರ್ಕಾರಿ ನಿವಾಸ ಮತ್ತು ಗೃಹ ಕಚೇರಿಗೆ ಹೆಚ್ಚುವರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಕಾಲ್ನಡಿಗೆ ಮೂಲಕ ಸಿಎಂ ಮನೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆರ್.ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಖಾಸಗಿ ನಿವಾಸಕ್ಕೆ ಹೆಚ್ಚುವರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಮುಖ್ಯ ರಸ್ತೆಯಿಂದ ಆರ್.ಟಿ ನಗರ ರಸ್ತೆ ಪ್ರವೇಶಿಸುವ ಮಾರ್ಗದಲ್ಲೇ ಬ್ಯಾರಿಕೇಡ್ ಹಾಕಲಾಗಿದ್ದು, ಪ್ರತಿಭಟನೆ, ಮುತ್ತಿಗೆಯಂತಹ ಚಟುವಟಿಕೆ ನಿರ್ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ.ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಸರ್ಕಾರಿ ನಿವಾಸ ರೇಸ್ ವ್ಯೂ ಕಾಟೇಜಿಗೂ ಹೆಚ್ಚುವರಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಕುಮಾರಪಾರ್ಕ್​ನಲ್ಲಿರುವ ಸಿಎಂ ಗೃಹ ಕಚೇರಿ ಕೃಷ್ಣಾಗೂ ಭದ್ರತೆ ಹೆಚ್ಚಿಸಲಾಗಿದ್ದು, ಮುತ್ತಿಗೆ, ಪ್ರತಿಭಟನೆಯಂತಹ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗಿದೆ.

ಮತ್ತೊಂದೆಡೆ ಚಕ್ರವರ್ತಿ ಲೇಔಟ್​​ನಲ್ಲಿರುವ ಸಚಿವ ಈಶ್ವರಪ್ಪ ಖಾಸಗಿ ನಿವಾಸ ಮತ್ತು ಕುಮಾರಪಾರ್ಕ್​ನಲ್ಲಿರುವ ಸರ್ಕಾರಿ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೂ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಹಿಂದಿನ ಲೇಖನರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 6 ಕಾರ್ಮಿಕರ ಸಾವು, 12 ಜನರಿಗೆ ಗಾಯ
ಮುಂದಿನ ಲೇಖನಸಮ ಸಮಾಜದ ನಿರ್ಮಾಣಕ್ಕೆ ಸರ್ಕಾರ ಒತ್ತು: ಸಚಿವ ಎಸ್.ಟಿ.ಸೋಮಶೇಖರ್