ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಜಾರಿ ಅಸಾಧ್ಯ ಎಂದ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಪಕ್ಷದಿಂದ ಕೊಟ್ಟ ನಾಲ್ಕು ಗ್ಯಾರಂಟಿ ಘೋಷಣೆಗಳನ್ನು ಈಡೇರಿಸದೆ ಇದ್ದಲ್ಲಿ ಮತ್ತೆ ಮತ ಕೇಳಲ್ಲ ಎಂದಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿಯೊಬ್ಬರ ಅಕೌಂಟಿಗೆ 15 ಲಕ್ಷ ಕೊಡುತ್ತೇವೆ ಎಂದು ನಾವು ಭರವಸೆ ಕೊಟ್ಟಿಲ್ಲ. ಬಿಜೆಪಿ ಪ್ರಣಾಳಿಕೆ ನೋಡಿ, ರೈತರ ಸಾಲಾ ಮನ್ನಾ ಮಾಡುತ್ತೇವೆ ಎಂದಿದ್ದಾರೆ. ಸರ್ಕಾರದ ಅಧಿಕೃತ ಜಾಹೀರಾತಿನಲ್ಲೂ ಮಹಿಳೆಯರಿಗೆ ಮೂರು ಸಾವಿರ ಕೊಡುವ ಭರವಸೆ ಕೊಟ್ಟಿದ್ದಾರೆ .3 ರಿಂದ 10 ಗಂಟೆ ಉಚಿತ ವಿದ್ಯುತ್ ಕೊಡುವ ಭರವಸೆ ಕೊಟ್ಟಿದ್ದಾರೆ. ಹೀಗಿದ್ದರೂ, ಪ್ರಧಾನಿ ಮೋದಿ ನಮ್ಮ ಗ್ಯಾರಂಟಿ ಬಗ್ಗೆ ಮಾತನಾಡಿದ್ದು ಸಂತೋಷ ಎಂದರು.
ನಮ್ಮ ಸರ್ಕಾರದ ಅವಧಿಯಲ್ಲಿ ಗ್ಯಾಸ್ ದರ 50 ರೂಪಾಯಿ ಹೆಚ್ಚಳ ಆಗಿದ್ದಾಗ ಸಿಲಿಂಡರ್ ಗೆ ಕೈಮುಗಿದು ಓಟ್ ಹಾಕಿ ಎಂದು ಮೋದಿ ಕರೆ ಕೊಟ್ಟಿದ್ದರು.ಇವಾಗ ನಾನೂ ಕೂಡಾ ಭಾಯಿಯೋ ಬಹನೋ ಗ್ಯಾಸ್ ದರ ಏರಿಕೆ ಆಗಿದೆ ಸಿಲಿಂಡರ್ ಗೆ ಕೈ ಮುಗಿದು ಮತದಾನ ಮಾಡಿ ಎಂದು ಕರೆ ಕೊಡುತ್ತೇನೆ. ನಾವು ಕೊಟ್ಟ ನಾಲ್ಕು ಭರವಸೆ ಈಡೇರಿಸುತ್ತೇವೆ. ಗೃಹ ಜ್ಯೋತಿ 200 ಯೂನಿಟ್ ವಿದ್ಯುತ್ ಉಚಿತ, 2000 ಪ್ರತಿ ತಿಂಗಳು ಖಚಿತ, ಅನ್ನ ಭಾಗ್ಯ ಹತ್ತು ಕೆಜಿ ಅಕ್ಕಿ ನಿಶ್ಚಿತ, ಯುವ ನಿಧಿ ಖಂಡಿತಾ. ನಾಲ್ಕು ಘೋಷಣೆ ಜಾರಿ ಮಾಡುತ್ತೇವೆ ಎಂದರು.
ಮೇ 10 ನೇ ತಾರೀಕು ರಾಜ್ಯದ ಭವಿಷ್ಯ ಬದಲಾವಣೆ ದಿನ. ಗ್ಯಾರಂಟಿ ಕಾರ್ಡ್ ಗೆ ಮುದ್ರೆ ಹಾಕುವ ದಿನ. ಅಧಿಕಾರಕ್ಕೆ ಬಂದ ಮೊದಲನೇ ಕ್ಯಾಬಿನೆಟ್ ನಲ್ಲೇ ನಿರ್ಧಾರ ಮಾಡುತ್ತೇವೆ. ನಾಲ್ಕು ಗ್ಯಾರಂಟಿ ಜಾರಿಗೊಳಿಸುತ್ತೇವೆ. ಜೂನ್ ತಿಂಗಳಲ್ಲಿ ಗ್ಯಾರಂಟಿ ಘೋಷಣೆ ಜಾರಿಗೊಳಿಸುತ್ತೇವೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲ್ಲ, ಅದಕ್ಕೆ ಏನೇನೋ ಪ್ರಯತ್ನ ಮಾಡುತ್ತಿದ್ದಾರೆ. ಗ್ಯಾರಂಟಿ ಘೋಷಣೆ ಜಾರಿಗೆ ತಂದಿಲ್ಲ ಎಂದರೆ ಮುಂದೆ ಮತ ಕೇಳಲ್ಲ. ಆದರೆ ಮೋದಿ ಹತಾಶರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಣ್ಣೀರು ಹಾಕಿಸಿದವರಿಗೆ ,ಕಣ್ಣೀರು ಹಾಕಿಸಬೇಕು ಎಂಬ ದೇವೇಗೌಡರ ಹೇಳಿಕೆ ವಿಚಾರವಾಗಿ ಮಾತನಾಡಿ, ಅವರ ಅನುಭವ, ಹಿರಿತನ, ರಾಜಕೀಯ ಚಾಣಕ್ಯತೆ ಮುಂದೆ ನಾವು ಸ್ಪರ್ಧೆ ಮಾಡಲು ಸಾಧ್ಯವಾ…? ಎಂದು ಪ್ರಶ್ನಿಸಿದರು.
ನಮ್ಮ ಕೈಯಲ್ಲಿ ಆಗುವುದಿಲ್ಲ, ಅವರಿಗೆ ಒಳ್ಳೆಯ ಆರೋಗ್ಯ ಇರಲಿ. ಇಷ್ಟು ವಯಸ್ಸು ಆದರೂ ಚುನಾವಣೆಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅವರಿಂದ ತಿಳಿದುಕೊಳ್ಳುವುದು ಸಾಕಷ್ಟು ಇದೆ. ಅವರ ಛಲ, ಹೋರಾಟ, ಆರೋಗ್ಯ ಚನ್ನಾಗಿ ಇರಲಿ, ಒಳ್ಳೆಯದಾಗಲಿ ಎಂದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.