ಮನೆ ಅಪರಾಧ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ: 6 ಮಂದಿ ಆರೋಪಿಗಳ ಬಂಧನ

ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ: 6 ಮಂದಿ ಆರೋಪಿಗಳ ಬಂಧನ

0

ಬೆಂಗಳೂರು: ನಗರದ ಚೌಡೇಶ್ವರಿನಗರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ರವಿ ಅಲಿಯಾಸ್​ ಮತ್ತಿ ರವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Join Our Whatsapp Group

ಮೇ.24ರ ಬುಧವಾರ ರಾತ್ರಿ 11 ಗಂಟೆಗೆ ಬೆಂಗಳೂರಿನ ಲಗ್ಗೆರೆ ಸಮೀಪದ ಚೌಡೇಶ್ವರಿ ನಗರದ ಹಳ್ಳಿ ರುಚಿ ಹೋಟೆಲ್ ಮುಂಭಾಗ ರವಿ ಅಲಿಯಾಸ್ ಮತ್ತಿ ರವಿಯನ್ನು ದುರ್ಷರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ನಂದಿನಿ ಲೇಔಟ್ ಠಾಣೆ ಪೊಲೀಸರು ಮಂಜ, ಸ್ಪಾಟ್ ನಾಗ, ಗೋಪಿ ಸೇರಿ ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಮತ್ತಿರವಿ ವೃತ್ತಿಯಲ್ಲಿ ಟೆಂಪೋ ಟ್ರಾವೆಲರ್ ಚಾಲಕ ಹಾಗೂ ಮೇಕೆ ಸಾಕಾಣಿಕೆದಾರನಾಗಿದ್ದ. ಮೇ.24ರ ಬುಧವಾರ ಸಂಜೆ ಕೆಲಸ ಮುಗಿಸಿದ ಬಳಿಕ ಬಾರ್‌ ನಲ್ಲಿ ಮದ್ಯ ಸೇವಿಸಿ ಅದೇ ಏರಿಯಾದ ಕೃಷ್ಣಮೂರ್ತಿ ಎಂಬ ಕಾಂಗ್ರೆಸ್ ಮುಖಂಡನ ಬರ್ತಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ. ಪಾರ್ಟಿ ಮುಗಿಸಿದ ಬಳಿಕ ಮನೆ ಕಡೆ ರವಿ ಹೊರಟಿದ್ದ, ಇದೇ ಸಮಯಕ್ಕೆ ಕಾದು ಕುಳಿತಿದ್ದ ಹಂತಕರು ಬೈಕ್‌ ನಲ್ಲಿ ಬಂದು ದಾಳಿ ನಡೆಸಿದ್ದರು. ತಪ್ಪಿಸಿಕೊಳ್ಳುವುದಕ್ಕಾಗಿ ರವಿ ಓಡಿದ್ದು, ಹಂತಕರು ಅಟ್ಟಾಡಿಸಿ ಹತ್ಯೆಗೈದಿದ್ದರು. ಅದಲ್ಲದೇ ಆತನ ತಲೆಯ ಮೇಲೆ ಸೈಜ್ ಕಲ್ಲು ಎತ್ತಾಕಿ ಪರಾರಿಯಾಗಿದ್ದರು.ಈ ಬಗ್ಗೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹಿಂದಿನ ಲೇಖನನೂತನ ಸಂಸತ್ ಭವನ ಉದ್ಘಾಟನೆಗೆ ಸಾಕ್ಷಿಯಾದ ಗಣ್ಯಾತಿಗಣ್ಯರು
ಮುಂದಿನ ಲೇಖನಚಿತ್ರದುರ್ಗ ಮುರುಘಾ ಮಠದ ಉಸ್ತುವಾರಿಯಾಗಿ ಬಸವಪ್ರಭು ಸ್ವಾಮೀಜಿ ಆಯ್ಕೆ