ಸರ್ಕಾರ ನಡೆಸಲು ಬಹುಮತ ಅಗತ್ಯ ದೇಶವನ್ನು ಮುನ್ನಡೆಸಲು ಒಮ್ಮತ ಅಗತ್ಯ. ಅದು ಪ್ರಜಾಪ್ರಭುತ್ವದ ಏಕೈಕ ತತ್ವವಾಗಿದೆ. ದೇಶವನ್ನು ನಡೆಸಲು ಏಕಾಭಿಪ್ರಾಯ ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಸಂಸದೀಯ ಸಭೆಯಲ್ಲಿ ಎನ್ಡಿಎ ಸಂಸದರು ಇಂದು 18ನೇ ಲೋಕಸಭಾ ನಾಯಕನನ್ನಾಗಿ ಪ್ರಧಾನಿ ನರೇಂದ್ರ ಮೋದಿಯನ್ನು ಆಯ್ಕೆ ಮಾಡಿದ ಬಳಿಕ ಅವರು ಮಾತನಾಡಿದರು.
2019 ರಲ್ಲಿ, ನೀವೆಲ್ಲರೂ ನನ್ನನ್ನು ನಾಯಕನಾಗಿ ಆಯ್ಕೆ ಮಾಡಿದಾಗ, ನಾನು ಒಂದು ವಿಷಯಕ್ಕೆ ಒತ್ತು ನೀಡಿದ್ದೆ ಅದು ನಂಬಿಕೆ. ಇಂದು ನೀವು ಮತ್ತೊಮ್ಮೆ ನನಗೆ ಈ ಜವಾಬ್ದಾರಿಯನ್ನು ನೀಡುತ್ತಿದ್ದೀರಿ ಎಂದರೆ ನಮ್ಮ ನಡುವಿನ ನಂಬಿಕೆಯ ಸೇತುವೆ ತುಂಬಾ ಬಲವಾಗಿದೆ. ಈ ಕ್ಷಣವೂ ಭಾವನಾತ್ಮಕವಾಗಿದೆ ಎಂದರು.
ಭಾರತದ ರಾಜಕೀಯ ಇತಿಹಾಸದಲ್ಲಿ ಮತ್ತು ಸಮ್ಮಿಶ್ರ ರಾಜಕೀಯದ ಇತಿಹಾಸದಲ್ಲಿ, ಚುನಾವಣಾ ಪೂರ್ವ ಮೈತ್ರಿ ಎಂದಿಗೂ ಎನ್ಡಿಎ ಬಲ ನೀಡಿರಲಿಲ್ಲ. ಇದು ಮೈತ್ರಿಕೂಟದ ಗೆಲುವು. ಲೋಕಸಭೆಯಲ್ಲಿ ಬಿಜೆಪಿಯ ಹಿರಿಯ ನಾಯಕ ರಾಜನಾಥ್ ಸಿಂಗ್ ಅವರು ನರೇಂದ್ರ ಮೋದಿ ಅವರ ಹೆಸರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಮತ್ತು ಬಿಜೆಪಿಯ ನಾಯಕರಾಗಿ ಪ್ರಸ್ತಾಪಿಸಿದರು.
ಇದಾದ ನಂತರ ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ, ನಿತಿನ್ ಗಡ್ಕರಿ ಮತ್ತು ಎನ್ಡಿಎ ಪಾಲುದಾರ ಟಿಡಿಪಿಯ ಚಂದ್ರಬಾಬು ನಾಯ್ಡು, ಜೆಡಿಯುನ ನಿತೀಶ್ ಕುಮಾರ್, ಶಿವಸೇನೆಯ ಏಕನಾಥ್ ಶಿಂಧೆ ಸೇರಿದಂತೆ ಇತರ ನಾಯಕರು ಪ್ರಸ್ತಾಪವನ್ನು ಬೆಂಬಲಿಸಿದರು.
ವೈವಿಧ್ಯತೆಯ ನಡುವೆ ಮೂರು ದಶಕಗಳ ಈ ಪಯಣ ದೊಡ್ಡ ಶಕ್ತಿಯ ಸಂದೇಶವನ್ನು ನೀಡುತ್ತದೆ. ಇಂದು ನಾನು ಹೆಮ್ಮೆಯಿಂದ ಹೇಳುತ್ತೇನೆ, ಒಂದು ಕಾಲದಲ್ಲಿ ಸಂಘಟನೆಯ ಕಾರ್ಯಕರ್ತನಾಗಿ, ನಾನು ಈ ಒಕ್ಕೂಟದ ಭಾಗವಾಗಿದ್ದೆ ಮತ್ತು ಇಂದು ಸದನದಲ್ಲಿ ಕುಳಿತು ನಿಮ್ಮೊಂದಿಗೆ ಕೆಲಸ ಮಾಡಿದ್ದೇನೆ, ನಾನು ಅದರೊಂದಿಗೆ ಮೂವತ್ತು ವರ್ಷಗಳಿಂದ ಒಡನಾಟ ಹೊಂದಿದ್ದೇನೆ. ಇದು ಅತ್ಯಂತ ಯಶಸ್ವಿ ಮೈತ್ರಿ ಎಂದು ನಾನು ಹೇಳಬಲ್ಲೆ ಎಂದು ಮೋದಿ ಹೇಳಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.