ಬೆಂಗಳೂರು : ಧರ್ಮಸ್ಥಳ ವಿರುದ್ಧ ನಡೆದಿರುವ ಷಡ್ಯಂತ್ರ ಪ್ರಕರಣವನ್ನು ಎನ್ಐಎ ಸೂಮೋಟೋ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಲು ಅವಕಾಶ ಇದೆ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಸದಾನಂದ ಗೌಡ್ರು, ಧರ್ಮಸ್ಥಳ ವಿರುದ್ಧ ಭವಿಷ್ಯದಲ್ಲಿ ಇಂಥ ಅಪಪ್ರಚಾರ, ಪಿತೂರಿಗಳಿಗೆ ಫುಲ್ ಸ್ಟಾಪ್ ಹಾಕುವ ಅಗತ್ಯ ಇದೆ. ಇದು ಎಸ್ಐಟಿಯಿಂದ ಸಾಧ್ಯವಿಲ್ಲ, ಎನ್ಐಎ ತನಿಖೆ ನಡೆದರೆ ಮಾತ್ರ ಸಾಧ್ಯವಿದೆ. ಎನ್ಐಎಗೆ ಸೂಮೋಟೋ ಪ್ರಕರಣ ದಾಖಲಿಸಿಕೊಳ್ಳಲು ಅವಕಾಶ ಇದೆ. ಎನ್ಐಎ ಸೂಮೋಟೋ ದಾಖಲಿಸಿಕೊಂಡು ಈ ಪ್ರಕರಣದ ತನಿಖೆ ಮಾಡಲಿ ಎಂದು ಒತ್ತಾಯಿಸಿದರು.
ಧರ್ಮಸ್ಥಳ ವಿರುದ್ಧದ ಪಿತೂರಿಯಲ್ಲಿ ಎಡಪಂಥೀಯರ ಕೈವಾಡ ಇದೆ ಅನ್ನೋ ಅನುಮಾನಗಳಿವೆ. ಎಡಪಂಥೀಯರು ಈಗ ಸ್ವಲ್ಪ ಮಟ್ಟಿಗೆ ಇರುವುದು ಕೇರಳದಲ್ಲಿ ಹಾಗಾಗಿ ಎನ್ಐಎ ಇದನ್ನು ತೆಗೆದುಕೊಳ್ಳಲು ಸೂಕ್ತ ಕಾರಣ ಇದೆ ಎಂದರು.
ಧರ್ಮಸ್ಥಳ ವಿರುದ್ಧ ಸುದೀರ್ಘ ಅವಧಿಯಿಂದ ಷಡ್ಯಂತ್ರ ನಡೆದಿದೆ. ಹೊಸ ಹೊಸ ಪಾತ್ರಧಾರಿಗಳು ಬಂದಿದ್ದಾರೆ. ಎಡಪಂಥೀಯರ ಹೆಗಲ ಮೇಲೆ ಕೋವಿ ಇಟ್ಟು ಗುಂಡು ಹಾರಿಸುವ ಕೆಲಸಗಳೂ ನಡೀತಿವೆ. ಇದೆಲ್ಲ ಸಮಗ್ರವಾಗಿ ತನಿಖೆ ನಡೆಸಬೇಕಾಗುತ್ತದೆ. ಹೀಗಾಗಿ ಈ ಪ್ರಕರಣ ಎನ್ಐಎಗೆ ಕೊಡಬೇಕು, ಅನ್ನೋದು ನಮ್ಮ ಒತ್ತಾಯ ಅಂತ ಇದೇ ವೇಳೆ ಡಿವಿಎಸ್ ತಿಳಿಸಿದರು.















